ಭದ್ರಾವತಿ, ನ. ೧೯: ತಾಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸರ್ವೆ ನಂ.೯೧/೩ರ ೦-೧೮ ಗುಂಟೆ ಆಸ್ತಿಯನ್ನು ನಕಲಿ ಖಾತೆ ಸೃಷ್ಠಿ ಮಾಡಿಕೊಂಡು ಕಬಳಿಸಲು ಯತ್ನಿಸುತ್ತಿರುವ ಎಂ.ಎಸ್ ಶಿವಕುಮಾರ್ ಎಂಬುವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲೂಕು ಪಂಚಾಯಿತಿ ಮುಂಭಾಗ ನ.೨೦ರ ಬೆಳಿಗ್ಗೆ ೧೧.೩೦ಕ್ಕೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ದಾವಣಗೆರೆ ಜಿಲ್ಲೆ ನಿಟ್ಟುವಳ್ಳಿ ಗ್ರಾಮದ ನಿವಾಸಿ ರುದ್ರೇಶ್ ಮೂಲತಃ ಡಿ.ಬಿ ಹಳ್ಳಿ ಗ್ರಾಮದವರಾಗಿದ್ದು, ಇವರ ಕುಟುಂಬಕ್ಕೆ ಸೇರಿದ ಆಸ್ತಿಯನ್ನು ಕಬಳಿಸಲು ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸೂಕ್ತ ದಾಖಲೆಗಳೊಂದಿಗೆ ಸುಮಾರು ೨ ತಿಂಗಳ ಹಿಂದೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಈ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಬಾಹ್ಯ ಬೆಂಬಲ ನೀಡಲಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ತಿಳಿಸಿದ್ದಾರೆ.
No comments:
Post a Comment