Monday, November 23, 2020

ಕರ್ತವ್ಯ ಲೋಪ : ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ವಿರುದ್ಧ ದೂರು

ದಿನಗೂಲಿ/ಪಿಸಿಪಿ ನೌಕರರಿಂದ ಸ್ವಂತ ಜಮೀನಿನಲ್ಲಿ ಜೋಳ ಮುರಿದು ತುಂಬಿಸುವ ಕೆಲಸಕ್ಕೆ

ಅರಣ್ಯ ಇಲಾಖೆಯ ದಿನಗೂಲಿ/ಪಿಸಿಪಿ ನೌಕರರನ್ನು ಮೀರಿ ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ಗ್ರಾಮದಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಜೋಳ ಮುರಿದು ತುಂಬಿಸುವ ಕೆಲಸದಲ್ಲಿ ತೊಡಗಿಸಿಕೊಂಡಿರುವುದು.
ಭದ್ರಾವತಿ, ನ. ೨೩: ಅರಣ್ಯ ಇಲಾಖೆಯ ಮಾವಿನಕಟ್ಟೆ ವಲಯ(ಶಾಂತಿಸಾಗರ)ದ ವಲಯ ಅರಣ್ಯಾಧಿಕಾರಿಯೊಬ್ಬರು ಕರ್ತವ್ಯ ಲೋಪ ವೆಸಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೋಮವಾರ ದೂರು ಸಲ್ಲಿಸಿದ್ದಾರೆ.
     ವಲಯ ಅರಣ್ಯಾಧಿಕಾರಿಯವರು ತಮ್ಮ ವಲಯದ ಎಲ್ಲಾ ದಿನಗೂಲಿ/ಪಿಸಿಪಿ ನೌಕರರನ್ನು ತಮ್ಮ ವಲಯದ ವ್ಯಾಪ್ತಿ ಮೀರಿ ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ಗ್ರಾಮದಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಜೋಳ ಮುರಿದು ತುಂಬಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲಸ ಮಾಡುವ ಜಮೀನಿನ ಸ್ಥಳಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ. ಈ ಕುರಿತು ಈಗಾಗಲೇ ನ.೧೯ರಂದು ದೂರವಾಣಿ ಮೂಲಕ ಮಾಹಿತಿ ಸಹ ನೀಡಲಾಗಿದೆ. ವಲಯ ಅರಣ್ಯಾಧಿಕಾರಿಗಳು ಕೆಲಸಕ್ಕೆ ಕರೆತಂದಿರುವ ಸತ್ಯ ಸಂಗತಿಯನ್ನು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಪಿಸಿಪಿ ನೌಕರರು ಹೊರ ಹಾಕಿದ್ದಾರೆ. ಅಲ್ಲದೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸಹ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
     ಈ ಎಲ್ಲಾ ವಿಚಾರಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಮಾಡಿರುವ ನಷ್ಟ, ದ್ರೋಹದ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.  



No comments:

Post a Comment