Saturday, December 12, 2020

ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ : ಈ ಬಾರಿ ಕಲಾಪ ರಾಜ್ಯದ ಜನರಿಗೆ ಮಾಡಿರುವ ದ್ರೋಹದ ಕಲಾಪ

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಸಂದರ್ಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪ

ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಡಿ. ೧೨: ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಈ ಬಾರಿ ವಿಧಾನಸಭೆ ಕಲಾಪ ರಾಜ್ಯದ ಜನರಿಗೆ ಮಾಡಿರುವ ದ್ರೋಹದ ಕಲಾಪವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪಿಸಿದರು.
     ಅವರು ಶನಿವಾರ ಮಾತನಾಡಿ, ನನ್ನ ರಾಜಕೀಯ ಜೀವನದಲ್ಲಿ ಈ ರೀತಿಯ ಕಲಾಪವನ್ನು ಎಂದಿಗೂ ನೋಡಿಲ್ಲ. ಸರ್ಕಾರ ವಿರೋಧ ಪಕ್ಷವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ರಾಜ್ಯದ ಜನರ ಹಲವಾರು ಸಮಸ್ಯೆಗಳನ್ನು ಚರ್ಚಿಸಲು ಮುಂದಾಗಿದ್ದರು. ಆದರೆ ಯಾವುದೇ ಚರ್ಚೆಯನ್ನು ಸಹ ನಡೆಸಲು ಅವಕಾಶ ನೀಡದೆ ತಮಗೆ ಬೇಕಾದ ಮಸೂದೆಗಳನ್ನು ಅನುಮೋದಿಸಿಕೊಂಡು ಸರ್ವಾಧಿಕಾರಿ ಧೋರಣೆ ಅನುಸರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಈ ಬಾರಿ ಕಲಾಪ ರಾಜ್ಯದ ಸಮಸ್ತ ಜನರಿಗೆ ಮಾಡಿರುವ ದ್ರೋಹದ ಕಲಾಪವಾಗಿದೆ. ರಾಜ್ಯದಲ್ಲಿ ನಿರುದ್ಯೋಗ, ಬಡತನ ಹೆಚ್ಚಾಗುತ್ತಿದೆ. ಜನಸಾಮಾನ್ಯರು ಸಾಕಷ್ಟು ಸಮಸ್ಯೆಗಳಿಗೆ ಒಳಗಾಗಿದ್ದಾರೆ. ಸರ್ಕಾರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಧರ್ಮದ ಹೆಸರಿನಲ್ಲಿ ರಾಜಕಾರಣ ನಡೆಸುತ್ತಿದೆ ಎಂದು ದೂರಿದರು.



No comments:

Post a Comment