ಭದ್ರಾವತಿ, ಡಿ. ೧೭: ತಾಲೂಕು ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಇದರ ಅಂಗವಾಗಿ ಡಿ.೨೭ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ.
ಆಯ್ಕೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಕ್ರೀಡಾಪಟುಗಳು ತಮ್ಮ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಬೆಳಿಗ್ಗೆ ೯ ಗಂಟೆಗೆ ಹಾಜರಾಗತಕ್ಕದ್ದು. ಪ್ರತಿ ತಂಡಕ್ಕೆ ೧೦ ಕ್ರೀಡಾಪಟುಗಳು ಒಳಗೊಂಡಂತೆ ಒಟ್ಟು ೮ ತಂಡಗಳ ಆಯ್ಕೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಕಬಡ್ಡಿ ತರಬೇತಿದಾರ ಎಚ್.ಆರ್ ರಂಗನಾಥ್, ಮೊ: ೮೯೭೧೨೫೯೫೯೧, ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಎಚ್.ಎನ್ ಕೃಷ್ಣೇಗೌಡ, ಮೊ: ೯೯೦೨೨೧೦೩೫೫, ತೀರ್ಪುಗಾರ ಎಂ.ಬಿ ಬಸವರಾಜ್, ಮೊ: ೯೪೪೯೪೭೨೮೬೩ ಮತ್ತು ಅಂತರಾಷ್ಟ್ರೀಯ ತೀರ್ಪುಗಾರ ಎಸ್.ಎನ್ ಸಿದ್ದಯ್ಯ, ಮೊ: ೯೧೬೪೦೪೭೭೭೭ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment