ಭದ್ರಾವತಿ ನಗರ ಆಶ್ರಯ ಸಮಿತಿಗೆ ಸರ್ಕಾರದಿಂದ ನಾರ್ಮನಿರ್ದೇಶನಗೊಂಡಿರುವ ನೂತನ ಸದಸ್ಯರನ್ನು ಸೋಮವಾರ ನಗರಸಭೆ ಪೌರಾಯುಕ್ತ ಮನೋಹರ್ ಅಭಿನಂದಿಸಿದರು.
ಭದ್ರಾವತಿ, ಡಿ. ೨೧: ನಗರ ಆಶ್ರಯ ಸಮಿತಿಗೆ ಸರ್ಕಾರದಿಂದ ನಾರ್ಮನಿರ್ದೇಶನಗೊಂಡಿರುವ ನೂತನ ಸದಸ್ಯರನ್ನು ಸೋಮವಾರ ನಗರಸಭೆ ಪೌರಾಯುಕ್ತ ಮನೋಹರ್ ಅಭಿನಂದಿಸಿದರು.
ಸಾಮಾನ್ಯ ವರ್ಗದಿಂದ ಭಂಡಾರಹಳ್ಳಿ ನಿವಾಸಿ ದೇವರಾಜ್, ಹಿಂದುಳಿದ ವರ್ಗದಿಂದ ಹುತ್ತಾ ಕಾಲೋನಿ ನಿವಾಸಿ ಸತೀಶ್ಕುಮಾರ್, ಅಲ್ಪ ಸಂಖ್ಯಾತರ ವರ್ಗದಿಂದ ಜೈನ ಸಮಾಜದ ಭೂತನಗುಡಿ ನಿವಾಸಿ ಸಂಪತ್ರಾಜ್ ಬಾಂಟಿಯಾ ಮತ್ತು ಪರಿಶಿಷ್ಟ ಜಾತಿ ವರ್ಗದಿಂದ ಅರಳಿಹಳ್ಳಿ ಬಸಲೀಕಟ್ಟೆ ಗ್ರಾಮದ ನಿವಾಸಿ ಗೌರಮ್ಮರವರು ನಾಮನಿರ್ದೇಶನಗೊಂಡಿದ್ದಾರೆ. ಈ ೪ ಸದಸ್ಯರನ್ನು ಪೌರಾಯುಕ್ತರು ಅಭಿನಂದಿಸುವ ಮೂಲಕ ಸಮಿತಿಯನ್ನು ಮತ್ತಷ್ಟು ಕ್ರಿಯಾಶೀಲಗೊಳಿಸುವ ಜೊತೆಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು.
ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ನಗರ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ನಾಮನಿರ್ದೇಶಿತ ಸದಸ್ಯ ಮಂಗೋಟೆ ರುದ್ರೇಶ್, ಸೂಡಾ ಸದಸ್ಯ ವಿ. ಕದಿರೇಶ್, ಕೆ. ಮಂಜಪ್ಪ, ರಾಜು, ಸುನಿತಾ, ಸರಸ್ವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment