ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರ ಹಾಗು ಗ್ರಾಮಾಂತರ ಭಾಗದ ಯುವಕರಿಗೆ ಉಚಿತವಾಗಿ ನೀಡಲಾಗುತ್ತಿರುವ ದೈಹಿಕ ಹಾಗೂ ಲಿಖಿತ ಪರೀಕ್ಷೆ ತರಬೇತಿ ಸ್ಥಳಕ್ಕೆ ಆಗಮಿಸಿ ಯುವಕರಿಗೆ ಸ್ಪೂರ್ತಿ ನೀಡಬೇಕೆಂದು ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೧೫: ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರ ಹಾಗು ಗ್ರಾಮಾಂತರ ಭಾಗದ ಯುವಕರಿಗೆ ಉಚಿತವಾಗಿ ನೀಡಲಾಗುತ್ತಿರುವ ದೈಹಿಕ ಹಾಗೂ ಲಿಖಿತ ಪರೀಕ್ಷೆ ತರಬೇತಿ ಸ್ಥಳಕ್ಕೆ ಆಗಮಿಸಿ ಯುವಕರಿಗೆ ಸ್ಪೂರ್ತಿ ನೀಡಬೇಕೆಂದು ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಭಾರತೀಯ ಸೇನೆ, ಅರೆ ಸೇನಾಪಡೆ, ಪೊಲೀಸ್ ಇಲಾಖೆ ಸೇರಿದಂತೆ ಇತರೆ ಭದ್ರತಾ ಇಲಾಖೆಗಳಿಗೆ ಅಗತ್ಯವಿರುವ ತರಬೇತಿಯನ್ನು ನಗರದ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಈ ತರಬೇತಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಜೊತೆಗೆ ತರಬೇತಿ ನಡೆಸಲಾಗುತ್ತಿರುವ
ಸ್ಥಳಕ್ಕೆ ಡಿ.೧೬ರ ಬುಧವಾರ ಬೆಳಿಗ್ಗೆ ೬.೩೦ಕ್ಕೆ ಆಗಮಿಸಬೇಕೆಂದು ಕೋರಲಾಯಿತು. ಸಂಘದ ಕಾರ್ಯದರ್ಶಿ ವೆಂಕಟ್ ಗಿರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment