ಎಸ್ಡಿಪಿಐ ಕಾರ್ಯಕರ್ತರಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ
ಬೆಂಗಳೂರಿನ ಡಿ.ಜೆ ಹಳ್ಳಿ ಹಾಗು ಕೆ.ಜೆ ಹಳ್ಳಿಯಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆದಿರುವ ಪ್ರಕರಣದಲ್ಲಿ ವಿನಾಕಾರಣ ಎಸ್ಡಿಪಿಐ ಕಾರ್ಯಕರ್ತರು ಹಾಗು ಅಲ್ಪಸಂಖ್ಯಾತರಾಗಿರುವ ಮುಸ್ಲಿಮರನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಭದ್ರಾವತಿ, ಡಿ. ೨೪: ಬೆಂಗಳೂರಿನ ಡಿ.ಜೆ ಹಳ್ಳಿ ಹಾಗು ಕೆ.ಜೆ ಹಳ್ಳಿಯಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆದಿರುವ ಪ್ರಕರಣದಲ್ಲಿ ವಿನಾಕಾರಣ ಎಸ್ಡಿಪಿಐ ಕಾರ್ಯಕರ್ತರು ಹಾಗು ಅಲ್ಪಸಂಖ್ಯಾತರಾಗಿರುವ ಮುಸ್ಲಿಮರನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ತಾಲೂಕು ಕಛೇರಿ ಮುಂಭಾಗ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರವಾದಿ ಮಹಮದ್ ಪೈಗಂಬರ್ರವರ ನಿಂದನೆಯಿಂದಾಗಿ ಬೆಂಗಳೂರಿನ ಡಿ.ಜೆ ಹಳ್ಳಿ ಹಾಗು ಕೆ.ಜೆ ಹಳ್ಳಿಯಲ್ಲಿ ಹಿಂಸಾಚಾರ ನಡೆದಿದ್ದು, ಈ ಪ್ರಕರಣ ರಾಜಕೀಯ ದುರುದ್ದೇಶದ ಒಂದು ಭಾಗವಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕರ್ನಾಟಕ ರಾಜ್ಯ ಪೊಲೀಸ್ ಹಾಗು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆದಿದ್ದು, ಎಸ್ಡಿಪಿಐ ಕಾರ್ಯಕರ್ತರು ತನಿಖೆಯಲ್ಲಿ ನಿರಂತವಾಗಿ ಪಾಲ್ಗೊಂಡು ಸಂಪೂರ್ಣವಾಗಿ ಸಹಕಾರ ನೀಡಿದ್ದಾರೆ. ಅಲ್ಲದೆ ತನಿಖೆ ಸಂದರ್ಭದಲ್ಲಿ ಎಸ್ಡಿಪಿಐ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭಿಸಿರುವುದಿಲ್ಲ. ಇದೀಗ ಕೇಂದ್ರ ಬಿಜೆಪಿ ನಾಯಕರ ನಿರ್ದೇಶನದ ಮೇರೆಗೆ ಎಸ್ಡಿಪಿಐ ಕಾರ್ಯಕರ್ತರನ್ನು ಈ ಪ್ರಕರಣದಲ್ಲಿ ಬಲಿಪಶುಗಳನ್ನಾಗಿ ಮಾಡುವ ಹುನ್ನಾರ ನಡೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಾಸ್ತವವಾಗಿ ಎಸ್ಡಿಪಿಐ ಅಲ್ಪಸಂಖ್ಯಾತರು ಅದರಲ್ಲೂ ವಿಶೇಷವಾಗಿ ಮುಸ್ಲಿಂ, ದಲಿತ ಹಾಗು ಇನ್ನಿತರ ಶೋಷಿತ ಸಮುದಾಯಗಳ ರಾಜಕೀಯ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಅಲ್ಲದೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತೊಡಗಿಸಿಕೊಂಡು ಪ್ರಶಂಸೆಗೆ ಪಾತ್ರವಾಗಿದೆ. ಈ ನಡುವೆ ಕೇಂದ್ರ ಬಿಜೆಪಿ ನಾಯಕರು ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಂಡು ಈ ಪ್ರಕರಣದಲ್ಲಿ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ಇತ್ತೀಚೆಗೆ ಎಸ್ಡಿಪಿಐ ಬೆಂಗಳೂರು ಜಿಲ್ಲಾಧ್ಯಕ್ಷ ಮಹಮದ್ ಶರೀಫ್ ಹಾಗು ಸ್ಥಳೀಯ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದನ್ನು ಎಸ್ಡಿಪಿಐ ಖಂಡಿಸುತ್ತದೆ. ರಾಷ್ಟ್ರೀಯ ತನಿಖಾ ಸಂಸ್ಥೆ ನಿಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕು. ಈಗಾಗಲೇ ಪ್ರಕರಣದಲ್ಲಿ ಬಂಧಿಸಲಾಗಿರುವ ಅಮಾಯಕರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.
ಎಸ್ಡಿಪಿಐ ತಾಲೂಕು ಅಧ್ಯಕ್ಷ ತಹಿರ್, ಕಾರ್ಯದಶಿ ಗೌಸ್ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment