ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮದಲ್ಲಿ ಜರುಗಿದ ಶ್ರೀ ಕಾಲಭೈರವೇಶ್ವರಸ್ವಾಮಿ ಜಯಂತಿ ಮತ್ತು ಕಾರ್ತಿಕ ದೀಪೋತ್ಸವದಲ್ಲಿ ಸ್ನೇಹ ಜೀವಿ ಬಳಗದ ಉಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ, ಡಿ. ೯: ತಾಲೂಕಿನ ಕಂಬದಾಳು ಹೊಸೂರು ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರಸ್ವಾಮಿ ಜಯಂತಿ ಮತ್ತು ಕಾರ್ತಿಕ ದೀಪೋತ್ಸವ ಅದ್ದೂರಿಯಿಂದ ಜರುಗಿತು.
ಸ್ವಾಮಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ಕೈಗೊಳ್ಳಲಾಯಿತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು. ಸ್ನೇಹಜೀವಿ ಉಮೇಶ್ ಬಳಗದಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸ್ನೇಹಜೀವಿ ಬಳಗದ ಸತೀಶ್, ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment