ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಒಂದು ತಿಂಗಳವರೆಗೆ ನಡೆದ ಮಾಸಾಚರಣೆ
ಪರಿಸರ ಮಾಸಾಚರಣೆ ಅಂಗವಾಗಿ ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯ ಆಡಳಿತ ಕಛೇರಿಯಲ್ಲಿರುವ ಮಹಾತ್ಮಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆಎಲ್ಎಸ್ ರಾವ್ ಮಾತನಾಡಿದರು.
ಭದ್ರಾವತಿ, ಡಿ. ೨೩: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ನ.೧೯ ರಿಂದ ಒಂದು ತಿಂಗಳವರೆಗೆ ಪರಿಸರ ಮಾಸಾಚರಣೆ ಹಮ್ಮಿಕೊಳ್ಳಲಾಗಿತ್ತು.
ಮಾಸಾಚರಣೆ ಅಂಗವಾಗಿ ಕಾರ್ಖಾನೆಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ, ರಸ ಪ್ರಶ್ನೆ ಸೇರಿದಂತೆ ಹಲವಾರು ಸ್ಪರ್ಧೆಗಳನ್ನು ಆಯೋಜಿಸಿ, ಪರಿಸರದ ಬಗ್ಗೆ ಕಾಳಜಿ ಮೂಡಿಸಲಾಯಿತು. ಪ್ರತಿಯೊಂದು ವಿಭಾಗದಲ್ಲಿಯೂ ೩ ಮೊದಲ ಮಂದಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಖಾನೆಯ ಆಡಳಿತ ಕಛೇರಿಯಲ್ಲಿರುವ ಮಹಾತ್ಮಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆಎಲ್ಎಸ್ ರಾವ್ ಮಾತನಾಡಿ, ಪ್ರತಿಯೊಬ್ಬರು ತಮ್ಮ ಪ್ರತಿದಿನದ ಚಟುವಟಿಕೆಗಳಲ್ಲಿ, ವಾಸಿಸುವ ಹಾಗು ಕೆಲಸ ಮಾಡುವ ಸ್ಥಳದ ಸುತ್ತಮುತ್ತ, ಪರಿಸರ ಕಾಳಜಿ ವಹಿಸಬೇಕು. ಇದರಿಂದ ಪರಿಸರ ರಕ್ಷಣೆ ಸಾಧ್ಯ. ಅಲ್ಲದೆ ನಾವೆಲ್ಲರೂ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬಹುದಾಗಿದೆ ಎಂದರು.
ಮುಖ್ಯ ಮಹಾಪ್ರಬಂಧಕ(ಸ್ಥಾವರ) ಸುರಜೀತ್ ಮಿಶ್ರಾ, ಪ್ರಭಾರಿ ಮಹಾಪ್ರಬಂಧಕ(ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ ಚಕ್ರವರ್ತಿ, ಮಹಾಪ್ರಬಂಧಕ(ಈ.ಎಮ್.ಡಿ) ಡಿ. ಲೋಕೇಶ್ವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉನ್ನಿಕೃಷ್ಣನ್ ಪ್ರಾಥಿಸಿದರು. ಆರ್. ಸತೀಶ್ ವಂದಿಸಿದರು.
No comments:
Post a Comment