Saturday, December 26, 2020

ಪೊಲೀಸ್ ಉಮೇಶ್‌ರವರ ೪೬ನೇ ವರ್ಷದ ಹುಟ್ಟುಹಬ್ಬ : ರಕ್ತದಾನ ಶಿಬಿರ

ಭದ್ರಾವತಿ ಹುತ್ತಾಕಾಲೋನಿ ನಿವಾಸಿ, ಸಮಾಜ ಸೇವಕ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್‌ರವರ ೪೬ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ ನೆರವೇರಿತು.
    ಭದ್ರಾವತಿ, ಡಿ. ೨೬: ನಗರದ ಹುತ್ತಾಕಾಲೋನಿ ನಿವಾಸಿ, ಸಮಾಜ ಸೇವಕ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್‌ರವರ ೪೬ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ರಕ್ತದಾನ ಶಿಬಿರ ನೆರವೇರಿತು.
    ಕಳೆದ ಕೆಲವು ವರ್ಷಗಳಿಂದ ಕ್ಷೇತ್ರದಲ್ಲಿ ಸಂಕಷ್ಟದಲ್ಲಿರುವ ಕಡು ಬಡವರಿಗಾಗಿ ಉಚಿತ ಆಂಬ್ಯುಲೆನ್ಸ್ ಸೇವೆ, ದೇವಸ್ಥಾನಗಳ ಧಾರ್ಮಿಕ ಕಾರ್ಯಗಳಿಗೆ ನೆರವು, ಕೊರೋನಾ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿದ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ಬಡವರಿಗೆ ಲಾಕ್‌ಡೌನ್ ಮುಕ್ತಾಯಗೊಳ್ಳುವವರೆಗೂ ಆಹಾರ ತಯಾರಿಸಿ ವಿತರಣೆ ಮಾಡುವ ಜೊತೆಗೆ ವಿವಿಧ ಸಂಘ-ಸಂಸ್ಥೆಗಳಿಗೆ ದವಸ ಧಾನ್ಯ ಸೇರಿದಂತೆ ದಿನಬಳಕೆ ವಸ್ತುಗಳ ವಿತರಣೆ ಸೇರಿದಂತೆ ವಿವಿಧ ರೀತಿಯ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಪೊಲೀಸ್ ಉಮೇಶ್‌ರವರು ತೊಡಗಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಉಮೇಶ್‌ರವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಅಚರಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಿದರು.
    ರಕ್ತದಾನ ಶಿಬಿರ, ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಕಾರ್ಯಕ್ರಮ ನೆರವೇರಿದವು. ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಹುಟ್ಟುಹಬ್ಬ ಶುಭಾಶಯ ಕೋರಿ ಉಮೇಶ್‌ರವರನ್ನು ಅಭಿನಂದಿಸಿದರು.
    ನಗರಸಭೆ ಹಿರಿಯ ಸದಸ್ಯರಾದ ಕೆ.ಎನ್ ಭೈರಪ್ಪಗೌಡ, ಮಹೇಶ್, ನ್ಯೂಟೌನ್ ಶ್ರೀ ಕರುಮಾರಿಯಮ್ಮ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕುಪ್ಪಸ್ವಾಮಿ, ಸತೀಶ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment