ಭಾವಸಾರ ವಿಜನ್ ಇಂಡಿಯಾ ಏರಿಯಾ-೧೦೭ರ ವತಿಯಿಂದ ಭಾವಸಾರ ಕ್ಷತ್ರಿಯ ಸಮಾಜ ಹಾಗು ರೆಡ್ ಕ್ರಾಸ್ ಸಂಜೀವಿನ ರಕ್ತ ನಿಧಿ ಸಹಯೋಗದೊಂದಿಗೆ ಭದ್ರಾವತಿ ನಗರದ ತರೀಕೆರೆ ರಸ್ತೆಯ ಶ್ರೀ ಪಾಂಡುರಂಗಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಉದ್ಘಾಟಿಸಿದರು.
ಭದ್ರಾವತಿ, ಡಿ. ೨೨: ಭಾವಸಾರ ವಿಜನ್ ಇಂಡಿಯಾ ಏರಿಯಾ-೧೦೭ರ ವತಿಯಿಂದ ಭಾವಸಾರ ಕ್ಷತ್ರಿಯ ಸಮಾಜ ಹಾಗು ರೆಡ್ ಕ್ರಾಸ್ ಸಂಜೀವಿನ ರಕ್ತ ನಿಧಿ ಸಹಯೋಗದೊಂದಿಗೆ ನಗರದ ತರೀಕೆರೆ ರಸ್ತೆಯ ಶ್ರೀ ಪಾಂಡುರಂಗಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ರಕ್ತದಾನ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕೆಂದರು. ಭಾವಸಾರ ವಿಜನ್ ಇಂಡಿಯಾ ಏರಿಯಾ-೧೦೭ರ ಕಾರ್ಯದರ್ಶಿ ಎಚ್.ಎನ್ ಯೋಗೇಶ್ ಕುಮಾರ್ ೨೯ನೇ ಬಾರಿ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಏರಿಯಾ-೧೦೭ರ ಅಧ್ಯಕ್ಷ ಡಿ.ಬಿ ವಿನಯ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಟಿ.ಎಸ್. ದುಗ್ಗೇಶ್, ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರ ರಾವ್, ಮುಖಂಡರಾದ ಡಿ.ಟಿ ಶ್ರೀಧರ್, ಡಾ. ಸಾತ್ವಿಕ್, ಧರಣೇಂದ್ರ ದಿನಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment