ಭದ್ರಾವತಿ : ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ನಿಯೋಜಿಸಲಾಗಿರುವ ಮತಗಟ್ಟೆ ಅಧಿಕಾರಿ(ಪಿಆರ್ಓ, ಎಪಿಆರ್ಓ), ಸಿಬ್ಬಂದಿಗಳಿಗೆ ಡಿ.೧೫ ರಂದು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾಗಾರ ಮುಂದೂಡಲಾಗಿದೆ ಎಂದು ತಹಸೀಲ್ದಾರ್ ಜೆ. ಸಂತೋಷ್ಕುಮಾರ್ ತಿಳಿಸಿದ್ದಾರೆ.
ರಾಜ್ಯದ ಎಲ್ಲೆಡೆ ಡಿ.೧೫ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಏಕಕಾಲದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತರಬೇತಿ ಕಾರ್ಯಾಗಾರ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ
No comments:
Post a Comment