ರಾಜ್ಯದಲ್ಲಿ ಒಕ್ಕಲಿಗರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನಿಗಮ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ತಾಲೂಕು ಒಕ್ಕಲಿಗರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೭: ರಾಜ್ಯದಲ್ಲಿ ಒಕ್ಕಲಿಗರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನಿಗಮ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ತಾಲೂಕು ಒಕ್ಕಲಿಗರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಒಕ್ಕಲಿಗ ಸಮುದಾಯದಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿದ್ದು, ಎಲ್ಲರನ್ನೂ ಸಮಾನತೆ ತಳಹದಿಯಲ್ಲಿ ನೋಡುವಂತಾಗಬೇಕು. ಈ ಹಿನ್ನಲೆಯಲ್ಲಿ ನಿಗಮ ಮಂಡಳಿ ಸ್ಥಾಪಿಸಿ ಸಮುದಾಯ ಅಭಿವೃದ್ಧಿಗೆ ಮುಂದಾಗಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
ಸಂಘದ ಕಾರ್ಯದರ್ಶಿ ಪ್ರಶಾಂತ್, ಪ್ರಮುಖರಾದ ಶಾರದ ಅಪ್ಪಾಜಿ, ಟಿ. ವೆಂಟಕೇಶ್, ಧರ್ಮೇಗೌಡ, ಟಿ. ಚಂದ್ರೇಗೌಡ, ಗೊಂದಿ ಜಯರಾಮ್, ರಾಮಕೃಷ್ಣ, ಕರೀಗೌಡ, ಶಶಿಕುಮಾರ್ ಗೌಡ, ಸತೀಶ್ಗೌಡ, ಎಂ.ಎಸ್ ಸುಧಾಮಣಿ, ಅನ್ನಪೂರ್ಣ ಸತೀಶ್, ರಾಧಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment