Saturday, December 19, 2020

೪ನೇ ವರ್ಷದ ದೀಪೋತ್ಸವ : ಹೋಮ, ಸತ್ಯನಾರಾಯಣ ಪೂಜೆ

ಭದ್ರಾವತಿ ತರೀಕೆರೆ ರಸ್ತೆಯ ವಲಯ ಅರಣ್ಯಾಧಿಕಾರಿಗಳ ಕಛೇರಿ ಪಕ್ಕದಲ್ಲಿರುವ ಶ್ರೀ ಧರ್ಮಶಾಸ್ತ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ೪ನೇ ವರ್ಷದ ದೀಪೋತ್ಸವ ಅಂಗವಾಗಿ ಹೋಮ, ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಭದ್ರಾವತಿ, ಡಿ. ೧೯: ನಗರದ ತರೀಕೆರೆ ರಸ್ತೆಯ ವಲಯ ಅರಣ್ಯಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ಶ್ರೀ ಧರ್ಮಶಾಸ್ತ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ  ೪ನೇ ವರ್ಷದ ದೀಪೋತ್ಸವ ಅದ್ದೂರಿಯಾಗಿ ಜರುಗಿತು.
    ಈ ಸಂಬಂಧ ದೇವಸ್ಥಾನದ ಮೂಲ ವಿಗ್ರಹಕ್ಕೆ ಅಭಿಷೇಕ, ಹೋಮ, ಸತ್ಯನಾರಾಯಣ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಮಧ್ಯಾಹ್ನ ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
    ದೇವಸ್ಥಾನದ ಪ್ರಧಾನ ಅರ್ಚಕ ಸಂಜೀವ್‌ಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು. ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಆರ್. ಮುನಿರಾಜು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ನೂರಾರು ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.

No comments:

Post a Comment