Thursday, December 10, 2020

ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆ : ಬಿಜೆಪಿಯಿಂದ ವಿವಿಧೆಡೆ ಗೋ ಪೂಜೆ

ಭದ್ರಾವತಿ ತಾಲೂಕಿನ ವಿವಿಧ ದೇವಾಲಯಗಳ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಗುರುವಾರ ಗೋ ಪೂಜೆ ನೆರವೇರಿಸಲಾಯಿತು.
ಭದ್ರಾವತಿ, ಡಿ. ೧೦: ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮಂಡಿಸುವಲ್ಲಿ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ವಿವಿಧ ದೇವಾಲಯಗಳ ಆವರಣದಲ್ಲಿ ಗೋ ಪೂಜೆ ನೆರವೇರಿಸಲಾಯಿತು.
    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವದಲ್ಲಿ ಹೊಸಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನ, ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನ ಹಾಗು ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ಭದ್ರೇಶ್ವರ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಗೋ ಪೂಜೆ ನೆರವೇರಿಸಲಾಯಿತು.
   ಪಕ್ಷದ ಪ್ರಮುಖರಾದ ಚನ್ನೇಶ್, ಅನ್ನಪೂರ್ಣ ಸಾವಂತ್, ಕಲ್ಪನಾ, ಮಂಜುಳ, ಸುಲೋಚನ ಪ್ರಕಾಶ್, ಕೆ.ಆರ್ ಸತೀಶ್, ನಾರಾಯಣ ದೊಡ್ಮನೆ, ಸುಬ್ರಮಣಿ, ರಾಜಶೇಖರ್ ಉಪ್ಪಾರ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ, ರಾಮಮೂರ್ತಿ, ಬಜರಂಗದಳ ಜಿಲ್ಲಾ ಸಂಚಾಲಕ ಸುನಿಲ್‌ಕುಮಾರ್, ತಾಲೂಕು ಸಂಚಾಲಕ ವಡಿವೇಲು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಹೊಸಮನೆ ಹಿಂದೂ ಮಹಾಸಭಾ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೂಡಾ ಸದಸ್ಯ ವಿ. ಕದಿರೇಶ್, ಎಂ. ಮಂಜುನಾಥ್, ಯುವ ಮೋರ್ಚಾ ಅಧ್ಯಕ್ಷ ವಿಜಯ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕಿನ ೨೨ ಗ್ರಾ.ಪಂ ವ್ಯಾಪ್ತಿಯಲ್ಲಿ ವಿಶೇಷವಾಗಿ ಪೂಜೆ ನೆರವೇರಿಸಲಾಯಿತು.

No comments:

Post a Comment