ಭದ್ರಾವತಿಯಲ್ಲಿ ತಾಲೂಕು ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಇದರ ಅಂಗವಾಗಿ ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಪಟುಗಳ ಆಯ್ಕೆ ನಡೆಯಿತು.
ಭದ್ರಾವತಿ, ಡಿ. ೨೭: ತಾಲೂಕು ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಇದರ ಅಂಗವಾಗಿ ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಪಟುಗಳ ಆಯ್ಕೆ ನಡೆಯಿತು.
ಒಟ್ಟು ೧೪೬ ಮಂದಿ ಕಬಡ್ಡಿ ಪಟುಗಳು ಪಾಲ್ಗೊಂಡಿದ್ದು, ಈ ಪೈಕಿ ತಲಾ ೮ ಜನರಂತೆ ೧೨ ತಂಡಗಳ ೯೬ ಮಂದಿ ಕಬಡ್ಡಿ ಪಟುಗಳನ್ನು ಆಯ್ಕೆ ಮಾಡಲಾಯಿತು. ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ನಗರಸಭಾ ಸದಸ್ಯ ಮಣಿ ಎ.ಎನ್.ಎಸ್, ಮಾರುತಿ ಮೆಡಿಕಲ್ಸ್ ಆನಂದ್ ಹಾಗು ನಗರಸಭೆ ಮಾಜಿ ಸದಸ್ಯ ಚನ್ನಪ್ಪ ಉಪಸ್ಥಿತರಿದ್ದು, ತಲಾ ಒಂದೊಂದು ತಂಡಗಳನ್ನು ಖರೀದಿಸಿದರು.
ರಾಜ್ಯಮಟ್ಟದ ಕಬಡ್ಡಿ ಕೇಸರಿ ಪ್ರಶಸ್ತಿ ವಿಜೇತ, ತರಬೇತಿದಾರ ಎಚ್.ಆರ್ ರಂಗನಾಥ್, ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಎಚ್.ಎನ್ ಕೃಷ್ಣೇಗೌಡ, ತೀರ್ಪುಗಾರ ಎಂ.ಬಿ ಬಸವರಾಜ್, ದೇವರಾಜ್ ಮತ್ತು ಅಂತರಾಷ್ಟ್ರೀಯ ತೀರ್ಪುಗಾರ ಎಸ್.ಎನ್ ಸಿದ್ದಯ್ಯ ನೇತೃತ್ವದಲ್ಲಿ ಆಯ್ಕೆ ನಡೆಯಿತು.
ಹಿರಿಯ ಕಬಡ್ಡಿ ಪಟು ಚಿನ್ನಯ್ಯ, ಅತ್ತಿಗುಂದ ಕರಿಯಪ್ಪ, ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವಸಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment