Sunday, December 27, 2020

ಏಕಾಂತಮ್ಮ ನಿಧನ

ಏಕಾಂತಮ್ಮ
ಭದ್ರಾವತಿ, ಡಿ. ೨೭: ನಗರ ರುದ್ರ ಕ್ಲಿನಿಕ್ ವೈದ್ಯ ಡಾ. ರುದ್ರಮೂರ್ತಿರವರ ಪತ್ನಿ ಏಕಾಂತಮ್ಮ  ಭಾನುವಾರ ನಿಧನ ಹೊಂದಿದರು.
ಪತಿ ಡಾ. ರುದ್ರಮೂರ್ತಿ, ಅಬುದಾಬಿಯಲ್ಲಿರುವ ಇಂಜಿನಿಯರ್ ಯತೀಶ್, ಬೆಂಗಳೂರಿನ ಖಾಸಗಿ ಕಂಪನಿಯೊಂದರ ವ್ಯವಸ್ಥಾಪಕ ತಿಪ್ಪೇಶ್ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಸೊಸೆಯಂದಿರನ್ನು ಹೊಂದಿದ್ದರು.
ಮೃತರ ಅಂತ್ಯಕ್ರಿಯೆ ಡಿ.೨೮ರ ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದ್ದು, ಮೃತರ ನಿಧನಕ್ಕೆ ನಗರದ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.



No comments:

Post a Comment