Sunday, December 27, 2020

ಹಳೇಯ ವಿದ್ಯಾರ್ಥಿ ಸ್ನೇಹಿತ ನ್ಯಾಯಾಧೀಶ ಎಸ್.ಟಿ ದೇವರಾಜ್‌ಗೆ ಸನ್ಮಾನ, ಅಭಿನಂದನೆ

ಮೈಸೂರಿನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಟಿ ದೇವರಾಜ್‌ರವರು ಕಾರ್ಯ ನಿಮಿತ್ತ ಕುಟುಂಬ ಸಮೇತ ಭದ್ರಾವತಿ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅವರ ವಿದ್ಯಾರ್ಥಿ ಸ್ನೇಹಿತರೆಲ್ಲರೂ ಒಂದೆಡೆ ಸೇರಿ ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ, ಡಿ. ೨೭: ಸುಮಾರು ೩೪ ವರ್ಷಗಳ ನಂತರ ವಿದ್ಯಾರ್ಥಿ ಸ್ನೇಹಿತರೊಬ್ಬರು ಉನ್ನತ ಹುದ್ದೆಯನ್ನು ಆಲಂಕರಿಸಿ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಸ್ನೇಹಿತರೆಲ್ಲರೂ ಸೇರಿ ಅವರನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ತಮ್ಮ ಹಳೇಯ ನೆನಪಿನೊಂದಿಗೆ ಕೆಲ ಕ್ಷಣ ಸಂಭ್ರಮಿಸಿದ ಘಟನೆ ಭಾನುವಾರ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ನಡೆಯಿತು. 
ಮೈಸೂರಿನ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಟಿ ದೇವರಾಜ್‌ರವರು ಕಾರ್ಯ ನಿಮಿತ್ತ ಕುಟುಂಬ ಸಮೇತ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅವರ ವಿದ್ಯಾರ್ಥಿ ಸ್ನೇಹಿತರೆಲ್ಲರೂ ಒಂದೆಡೆ ಸೇರಿ ಸನ್ಮಾನಿಸಿ ಅಭಿನಂದಿಸಿದರು. 
ದೇವರಾಜ್‌ರವರು ೩೪ ವರ್ಷಗಳ ಹಿಂದೆ ನಗರದ ಬೊಮ್ಮನಕಟ್ಟೆ ಸರ್.ಎಂ.ವಿ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬಿ.ಎಸ್ಸಿ  ವ್ಯಾಸಂಗ ನಡೆಸಿದ್ದರು. ಈ ಸಂದರ್ಭದಲ್ಲಿ ಇವರೊಂದಿಗೆ ವ್ಯಾಸಂಗ ನಡೆಸುತ್ತಿದ್ದ ನಗರದ ವಿಇಎಸ್ ವಿದ್ಯಾಸಂಸ್ಥೆಯ ರಾಷ್ಟ್ರ ಪ್ರಶಸ್ತಿ ಶಿಕ್ಷಕ ಶಿವಲಿಂಗೇಗೌಡ, ಡಾ. ಭುಜಂಗಶೆಟ್ಟಿ, ರವಿಶಂಕರ್, ಬಾಬುಶೇಟ್, ಭುವನೇಶ್ವರ್, ಉಪನ್ಯಾಸಕ ಮಲ್ಲೇಶಪ್ಪ, ಮುಖ್ಯೋಪಾಧ್ಯಾಯ ಜಯಪ್ಪ, ವಕೀಲ ಕಾರಂತ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಹೈಕೋರ್ಟ್ ವಕೀಲ ಲೋಕನಾಥ್ ಹಾಗು ಇನ್ನಿತರರು ತಮ್ಮ ಹಳೇಯ ನೆನಪುಗಳೊಂದಿಗೆ ಕೆಲ ಕ್ಷಣ ಸಂಭ್ರಮಿಸಿದರು. 

No comments:

Post a Comment