Wednesday, December 9, 2020

ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಶಶಿಕುಮಾರ್ ಎಸ್ ಗೌಡ ಸ್ಪರ್ಧೆ

ಶಶಿಕುಮಾರ್ ಎಸ್ ಗೌಡ
ಭದ್ರಾವತಿ, ಡಿ. ೯: ೩ ಬಾರಿ ಲೋಕಸಭಾ ಚುನಾವಣೆ ಹಾಗು ೧ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದ ನಗರದ ನಿವಾಸಿ ಜನತಾದಳ(ಸಂಯುಕ್ತ) ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಇದೀಗ ಒಕ್ಕಲಿಗರ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ೩ ಮತ್ತು ೪ನೇ ಸ್ಥಾನ ಕಾಯ್ದುಕೊಂಡಿದ್ದರು. ಹಲವು ವಿಭಿನ್ನ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಒಕ್ಕಲಿಗ ಸಮಾಜದ ಮುಖಂಡರಾಗಿ ಶಶಿಕುಮಾರ್ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಡಿ.೧೦ರಂದು ಹುತ್ತಾಕಾಲೋನಿಯಲ್ಲಿರುವ ಒಕ್ಕಲಿಗರ ಸಂಘದ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.



No comments:

Post a Comment