Friday, December 18, 2020

ಮತದಾರರ ದಿನಾಚರಣೆ ಅಂಗವಾಗಿ ಡಿ.೧೯ರಂದು ಪ್ರೌಢ ಶಾಲಾ ಮಕ್ಕಳಿಗೆ ಸ್ಪರ್ಧಾತ್ಮಕ ಚಟುವಟಿಕೆ

ಭದ್ರಾವತಿ, ಡಿ. ೧೮: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರೌಢ ಶಾಲಾ ಮಕ್ಕಳಿಗೆ ತಾಲೂಕು ಹಂತದ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಡಿ.೧೯ರಂದು ಬೆಳಿಗ್ಗೆ ೯.೧೫ ಹಳೇನಗರದ ಬಿಆರ್‌ಸಿ ಕಚೇರಿಯಲ್ಲಿ ಪ್ರಬಂಧ ಸ್ಪರ್ಧೆ(ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ), ಪೋಸ್ಟರ್ ಮತ್ತು ಕೋಲಾಜ್ ಮೇಕಿಂಗ್ ಹಾಗು ರಸಪ್ರಶ್ನೆ ಒಟ್ಟು ೪ ಸ್ಪರ್ಧೆಗಳು ನಡೆಯಲಿವೆ.
ಶಾಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮತದಾರರ ಸಾಕ್ಷರತಾ ಸಂಘಗಳ ತಾಲೂಕು ಅಧಿಕಾರಿಯಾದ ನವೀದ್ ಅಹ್ಮದ್ ಪರ್ವೀಜ್, ಮೊ: ೯೮೮೬೨೧೪೧೬೦ ರವರಿಗೆ ಸಂಪರ್ಕಿಸುವಂತೆ ಕೋರಲಾಗಿದೆ.


No comments:

Post a Comment