Monday, May 11, 2020

ಬಡವರ ಸಂಕಷ್ಟಕ್ಕೆ ಸ್ಪಂದಿಸಿದ ಹಾಲಿ-ಮಾಜಿ ಶಾಸಕರಿಗೆ ಅಭಿನಂದನೆ, ಕೃತಜ್ಞತೆ

ಭದ್ರಾವತಿಯಲ್ಲಿ ಬಡ ಶ್ರಮಿಕ ವರ್ಗದವರ ನೆರವಿಗೆ ಮುಂದಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮ ತಾಲೂಕಿನಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಸವಿತ ಸಮಾಜ ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಶ್ರಮಿಕ ವರ್ಗದ ಸ್ಥಿತಿಗತಿಗಳನ್ನು ಅರಿತು ಆಹಾರ ಸಾಮಗ್ರಿ ವಿತರಿಸುವ ಮೂಲಕ ನೆರವಿಗೆ ಮುಂದಾದ ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರನ್ನು ವಿವಿಧ ಸಂಘಟನೆಗಳ ವತಿಯಿಂದ ಅಭಿನಂದಿಸಲಾಯಿತು.
ಭದ್ರಾವತಿಯಲ್ಲಿ ಬಡ ಶ್ರಮಿಕ ವರ್ಗದವರ ನೆರವಿಗೆ ಮುಂದಾದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರನ್ನು ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್, ಉಪಾಧ್ಯಕ್ಷ ಎಂ.ಎಸ್  ಶ್ರೀನಿವಾಸ್, ಕಾರ್ಯದರ್ಶಿ ಅಶೋಕ್‌ರಾವ್  ಘೋರ್ಪಡೆ, ಗೌರವಾಧ್ಯಕ್ಷ ವೀರಲಾಲ್, ತಾಲೂಕು ಛಾಯ ಗ್ರಾಹಕರ ಸಂಘದ ಅಧ್ಯಕ್ಷ ರಾಮಕೃಷ್ಣ,  ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್, ಕಾರ್ಯದರ್ಶಿ ರೆಡ್‌ಸನ್ ರಾಜು,ಸದಸ್ಯರಾದ ಜೆ. ಕುಮಾರ್, ಶಿವಪ್ರಸಾದ್ ಮತ್ತು ಪಿ. ಮಲ್ಲೇಶ್ ಇನ್ನಿತರರು ಅಭಿನಂದಿಸಿ ಕೃತಜ್ಞತೆ ಸಲ್ಲಿಸುವ ಮೂಲಕ ಮುಂದಿನ ದಿನಗಳಲ್ಲೂ ಇದೆ ರೀತಿ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದರು. 




ಅಗ್ನಿಶಾಮಕ ಇಲಾಖೆ ಸಹಕಾರದೊಂದಿಗೆ ೨ನೇ ಹಂತದಲ್ಲಿ ಔಷಧಿ ಸಿಂಪಡಣೆ

ಭದ್ರಾವತಿ, ಮೇ. ೧೧: ಜನದಟ್ಟಣೆ ಅಧಿಕಗೊಳ್ಳುವ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ೨ನೇ ಹಂತದ ಔಷಧಿ ಸಿಂಪಡಣೆ ಕಾರ್ಯ ಸೋಮವಾರದಿಂದ ನಡೆಯುತ್ತಿದೆ.
ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಉಲ್ಬಣಗೊಂಡ ಪರಿಣಾಮ ಆರಂಭಿಕ ಹಂತದಲ್ಲಿಯೇ ಸ್ಥಳೀಯ ಸಂಸ್ಥೆಗಳು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲೆಡೆ ಒಂದು ಹಂತದಲ್ಲಿ  ನೀರಿನೊಂದಿಗೆ ಸೋಡಿಯಂ ಹೈಪೋ ಕ್ಲೋರೈಟ್ ಮಿಶ್ರಣದ ಔಷಧಿ ಸಿಂಪಡಣೆ ಕಾರ್ಯ ಕೈಗೊಳ್ಳಲಾಗಿತ್ತು.
ಇದೀಗ ೨ನೇ ಹಂತವಾಗಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ ಸಿಂಪಡಣೆ ಕಾರ್ಯ ನಡೆಯಿತು. ಘಟಕ ವ್ಯವಸ್ಥಾಪಕಿ ಅಂಬಿಕಾ ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.
ಮಧ್ಯಾಹ್ನ ಚನ್ನಗಿರಿ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಸದಸ್ಯ ಡಾ. ಎನ್‌ಟಿಸಿ ನಾಗೇಶ್, ಅಗ್ನಿಶಾಮಕ ಇಲಾಖೆ ಠಾಣಾಧಿಕಾರಿ ವಸಂತಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.





Virus-free. www.avast.com