Friday, May 22, 2020

ಶುಲ್ಕ ವಸೂಲಾತಿ : ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಭದ್ರಾವತಿ ನಗರದಲ್ಲಿ ಕೆಲವು ಖಾಸಗಿ ಶಾಲೆಗಳು ಸರ್ಕಾರದ ಆದೇಶದ ವಿರುದ್ಧ ಶುಲ್ಕ ವಸೂಲಾತಿ ಮಾಡುತ್ತಿವೆ. ತಕ್ಷಣ ಈ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್‌ಗೆ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಮೇ. ೨೨: ನಗರದಲ್ಲಿ ಕೆಲವು ಖಾಸಗಿ ಶಾಲೆಗಳು ಸರ್ಕಾರದ ಆದೇಶದ ವಿರುದ್ಧ ಶುಲ್ಕ ವಸೂಲಾತಿ ಮಾಡುತ್ತಿವೆ. ತಕ್ಷಣ ಈ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್‌ಗೆ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮವಾಗಿ ಯಾವುದೇ ವಯಿವಾಟು, ಉದ್ಯೋಗವಿಲ್ಲದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದು, ಆರ್ಥಿಕ ಸಮಸ್ಯೆ ಎದುರಾಗಿದೆ. ಇದನ್ನು ಮನಗಂಡಿರುವ ಸರ್ಕಾರ ಖಾಸಗಿ ಶಾಲೆಗಳಲ್ಲಿ ಶುಲ್ಕ ವಸೂಲಾತಿ ಮಾಡಬಾರದೆಂದು ಆದೇಶಿಸಿದೆ. ಆದರೂ ಸಹ ಸರ್ಕಾರದ ಆದೇಶ ಗಾಳಿಗೆ ತೂರಿ ಪೋಷಕರ ಮೊಬೈಲ್‌ಗೆ ಎಸ್‌ಎಂಎಸ್ ಕಳುಹಿಸುವುದರ ಮೂಲಕ ವಸೂಲಾತಿಗೆ ಮುಂದಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಈ ಹಿನ್ನಲೆಯಲ್ಲಿ ತಕ್ಷಣ ಶಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿಗೊಳಿಸಿ ಸಭೆ ನಡೆಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.
ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕ್ರಮ:
ಮನವಿ ಸ್ವೀಕರಿಸಿದ ತಹಸೀಲ್ದಾರ್ ಶಿವಕುಮಾರ್ ಮಾತನಾಡಿ, ತಕ್ಷಣ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಉಪಾಧ್ಯಕ್ಷ ಮುಳ್ಕೆರೆ ಲೋಕೇಶ್, ಸಹ ಕಾರ್ಯದರ್ಶಿಗಳಾದ ಆರ್. ಪರಮೇಶ್ ನಾಯ್ಕ, ಬಿ.ಎಸ್ ಪ್ರದೀಪ್ ಕುಮಾರ್, ಖಜಾಂಚಿ ಪರಮೇಶ್ವರಾಚಾರ್, ಜೋಸೆಫ್, ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.