ಗಂಡನ ಅನೈತಿಕ ಸಂಬಂಧ ಸೇರಿದಂತೆ ಕೌಟುಂಬಿಕ ಕಲಹದಿಂದ ನೊಂದ ಭದ್ರಾವತಿ ತಾಲೂಕಿನ ಪದ್ಮೇನಹಳ್ಳಿಯ ರೂಪಾ ಎಂಬ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು.
ಭದ್ರಾವತಿ, ಜೂ. ೬: ಗಂಡನ ಅನೈತಿಕ ಸಂಬಂಧ ಸೇರಿದಂತೆ ಕೌಟುಂಬಿಕ ಕಲಹದಿಂದ ನೊಂದ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪದ್ಮೇನಹಳ್ಳಿಯಲ್ಲಿ ನಡೆದಿದೆ.
ರೂಪ(೧೯) ಮೃತಪಟ್ಟಿದ್ದು, ಪದ್ಮೇನಹಳ್ಳಿಯ ನಿವಾಸಿ ಕಿರಣ ಎಂಬಾತನನ್ನು ಪ್ರೀತಿಸಿ ಕಳೆದ ೧೦ ತಿಂಗಳ ಹಿಂದೆ ವಿವಾಹವಾಗಿದ್ದಳು. ಜೂ.೪ರಂದು ಬೆಳಿಗ್ಗೆ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಕಿರಣ ರೂಪಾಳಿಗೆ ತವರು ಮನೆಯಿಂದ ಹಣ ತರುವಂತೆ ದೈಹಿಕ ಹಾಗು ಮಾನಸಿಕವಾಗಿ ಕಿರುಕುಳ ನೀಡುವ ಜೊತೆಗೆ ಮಹಿಳೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಈ ಹಿನ್ನಲೆಯಲ್ಲಿ ಬೇಸತ್ತ ರೂಪ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.