Friday, June 12, 2020

ಆಶಾ ಕಾರ್ಯಕರ್ತೆಯರಿಗೆ ಬೂಸ್ಟರ್ ಕಿಟ್ ವಿತರಣೆ

ಭದ್ರಾವತಿಯಲ್ಲಿ ಕೋವಿಡ-೧೯ ಸಂಬಂಧ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಬೂಸ್ಟರ್ ಕಿಟ್ ವಿತರಿಸಿದರು. 
ಭದ್ರಾವತಿ, ಜೂ. ೧೨:  ಕೋವಿಡ್-೧೯ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ತಾಲೂಕು ಆಯುಷ್ ಇಲಾಖೆಯಿಂದ ನೀಡಲಾದ ಇಮ್ಯುನಿಟಿ ಬೂಸ್ಟರ್ ಕಿಟ್ ವಿತರಿಸಿದರು. 
ತಮ್ಮ ಗೃಹ ಕಛೇರಿಯಲ್ಲಿ ಕಿಟ್ ವಿತರಿಸಿ ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಸಲಹೆ ನೀಡಿದರು. ಆಶಾ ಕಾರ್ಯಕರ್ತೆಯರು, ಆಯುಷ ಇಲಾಖೆ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. 

ಬಿಜೆಪಿ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

ಭದ್ರಾವತಿ ಬಿಜೆಪಿ ಮಹಿಳಾ ಮೋರ್ಚಾ ನೂತನ ಅಧ್ಯಕ್ಷೆ ಕಲ್ಪನ
ಭದ್ರಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಜಯರಾಜ್ 
ಭದ್ರಾವತಿ, ಜೂ. ೧೨: ತಾಲೂಕಿನ ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನೇಮಕಗೊಂಡಿದ್ದಾರೆ. 
ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಕಲ್ಪನ, ಪ್ರಧಾನ ಕಾರ್ಯದರ್ಶಿಯಾಗಿ ಮಂಜುಳ, ಯುವ ಮೋರ್ಚಾ ಅಧ್ಯಕ್ಷರಾಗಿ ಎಂ. ವಿಜಯರಾಜ್, ಪ್ರಧಾನ ಕಾರ್ಯದರ್ಶಿಯಾಗಿ ನಕುಲ್ ರೇವಣಕರ್, ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಜೆ. ಸುಬ್ರಮಣಿ, ಆರ್.ಪಿ ವೆಂಕಟೇಶ್, ಎಸ್.ಸಿ ಮೋರ್ಚಾ ಅಧ್ಯಕ್ಷ ಗಣೇಶ್‌ರಾವ್, ಮುರುಳಿ, ರೈತ ಮೋರ್ಚಾ ಅಧ್ಯಕ್ಷರಾಗಿ ನಾಗರಾಜರಾವ್ ಅಂಬೋರೆ, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಆರ್ ಮೋಹನ್‌ಕುಮಾರ್, ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಇಮ್ರಾನ್ ಆಲಿ, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಜಾಬೀರ್ ನೇಮಕಗೊಂಡಿದ್ದಾರೆಂದು ಪಕ್ಷದ ತಾಲೂಕು ಮಂಡಲದ ಅಧ್ಯಕ್ಷ ಎಂ. ಪ್ರಭಾಕರ್ ತಿಳಿಸಿದ್ದಾರೆ. 

ಕಂಟೈನ್‌ಮೆಂಟ್ ವಲಯಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

ಭದ್ರಾವತಿಯಲ್ಲಿ ರಂಗಪ್ಪ ವೃತ್ತದಿಂದ ಹೊಳೆಹೊನ್ನೂರು ವೃತ್ತದ ವರೆಗೆ ಕಂಟೈನ್‌ಮೆಂಟ್ ವಲಯವೆಂದು ಘೋಷಿಸಲಾಗಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ಭದ್ರಾವತಿ, ಜೂ. ೧೨: ಮಹಿಳೆಯೊಬ್ಬರಲ್ಲಿ ಗುರುವಾರ ಕೊರೋನಾ ವೈರಸ್ ಪತ್ತೆಯಾದ ಹಿನ್ನಲೆಯಲ್ಲಿ ನಗರದ ರಂಗಪ್ಪ ವೃತ್ತದಿಂದ ಹೊಳೆಹೊನ್ನೂರು ವೃತ್ತದ ವರೆಗೆ ಕಂಟೈನ್‌ಮೆಂಟ್ ವಲಯವೆಂದು ಘೋಷಿಸಲಾಗಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ವಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ವೈರಸ್ ಹರಡದಂತೆ ಕಟ್ಟೆಚ್ಚರ ವಹಿಸುವಂತೆ ಹಾಗೂ ನಿವಾಸಿಗಳಿಗೆ ದಿನ ನಿತ್ಯದ ಅಗತ್ಯ ವಸ್ತುಗಳನ್ನು ಕಲ್ಪಿಸಿಕೊಡುವಂತೆ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಸೂಚಿಸಿದರು. ಅಲ್ಲದೆ ಜನದಟ್ಟಣೆ ಅಧಿಕವಿರುವ ತಾಲೂಕು ಕಛೇರಿ, ನ್ಯಾಯಾಲಯ ಸಂಕೀರ್ಣ, ಜೈ ಭೀಮ ನಗರ, ಸಂತೆ ಮೈದಾನ ಭಾಗಗಳಲ್ಲಿ ಪರಿಶೀಲನೆ ನಡೆಸಿದರು.
ರಸ್ತೆಯ ಎರಡು ಕಡೆ ಬ್ಯಾರಿಗೇಡ್ ಅಳವಡಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಒಟ್ಟು ೨೧ ಕುಟುಂಬಗಳಿದ್ದು, ಈ ಕುಟುಂಬಗಳ ಸದಸ್ಯರ ಮೊಬೈಲ್ ಸಂಖ್ಯೆ ಪಡೆಯಲಾಗಿದೆ. ನಗರಸಭೆ ಅಧಿಕಾರಿಗಳು ಈ ಕುಟುಂಬಗಳಿಗೆ ದಿನ ನಿತ್ಯದ ಅಗತ್ಯ ವಸ್ತುಗಳನ್ನು ಪೂರೈಸಲು ಕುಟುಂಬಗಳಿಗೆ ವಾಟ್ಸಪ್ ಸಂಖ್ಯೆ ನೀಡಿದ್ದು, ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ಪೂರೈಸಲಿದ್ದಾರೆ. 
ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯ್ಕ, ನಗರವೃತ್ತ ನಿರೀಕ್ಷಕರು, ನಗರಸಭೆ ಪರಿಸರ ಅಭಿಯಂತರ ರುದ್ರೇಗೌಡ, ಕಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ, ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.