ಭದ್ರಾವತಿಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಕೊರೋನಾ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಭದ್ರಾವತಿ, ಜು. ೨೫: ತಾಲೂಕಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಮುಂದುವರೆದಿದ್ದು, ಶನಿವಾರ ಪುನಃ ೬ ಪ್ರಕರಣಗಳು ಪತ್ತೆಯಾಗಿವೆ. ಕೊರೋನಾ ವಾರಿಯರ್ಸ್ ಮಕ್ಕಳ ವೈದ್ಯನಿಗೂ ಸೋಂಕು ತಗುಲಿದೆ.
ಸಿಎಂಎಸ್ ಚಿತ್ರ ಮಂದಿರ ಹಿಂಭಾಗದ ೬೨ ವರ್ಷದ ಮಕ್ಕಳ ವೈದ್ಯ, ಹೊಸಮನೆ ವಿಜಯನಗರ ಕಾಚಗೊಂಡನಹಳ್ಳಿಯಲ್ಲಿ ೨೨ ವರ್ಷದ ಹುಡುಗ, ಗೌಳಿಗರ ಬೀದಿಯಲ್ಲಿ ೬೨ ವರ್ಷದ ವ್ಯಾಪಾರಿ, ಹೊನ್ನಟ್ಟಿಹೊಸೂರು ಗ್ರಾಮದಲ್ಲಿ ೩೩, ತಡಸ ಗ್ರಾಮದಲ್ಲಿ ೩೮ ವರ್ಷದ ಪುರುಷ ಮತ್ತು ಸಿಂಗನಮನೆ ಗ್ರಾಮದಲ್ಲಿ ೫೪ ವರ್ಷದ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ.
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ.