Sunday, September 27, 2020

ಎಂ.ಜೆ ಅಪ್ಪಾಜಿ ಒಂದು ನೆನಪು

ಬಿ.ಎಚ್ ರಸ್ತೆ ಲೋಯರ್ ಹುತ್ತಾ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಸ್ಮರಣಾರ್ಥ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಎಂ.ಜೆ ಅಪ್ಪಾಜಿ ಒಂದು ನೆನಪು' ಕಾರ್ಯಕ್ರಮವನ್ನು ಜೆಡಿಎಸ್ ಪಕ್ಷದ ರಾಜ್ಯ ಮುಖಂಡ ಎಂ. ಶ್ರೀಕಾಂತ್ ಉದ್ಘಾಟಿಸಿದರು.
ಭದ್ರಾವತಿ, ಸೆ. ೨೮: ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಸ್ಮರಣಾರ್ಥ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಎಂ.ಜೆ ಅಪ್ಪಾಜಿ ಒಂದು ನೆನಪು' ಕಾರ್ಯಕ್ರಮವನ್ನು ಜೆಡಿಎಸ್ ಪಕ್ಷದ ರಾಜ್ಯ ಮುಖಂಡ ಎಂ. ಶ್ರೀಕಾಂತ್ ಉದ್ಘಾಟಿಸಿದರು.
ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಗಾನ ಗಂಧರ್ವ, ಗಾಯಕ ಎಸ್.ಬಿ ಬಾಲಸುಬ್ರಮಣ್ಯಂರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಲಾಯಿತು.
ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಆನಂದ್, ಛತ್ರಪತಿ ಶಿವಾಜಿ ಸೇವಾ ಸಂಘದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ, ಅಪ್ಪಾಜಿಯವರ ಪುತ್ರ ಎಂ.ಎ ಅಜಿತ್, ಮುಖಂಡರಾದ ಕೆ. ಕರಿಯಪ್ಪ, ಎಸ್.ಪಿ ಮೋಹನ್ ರಾವ್, ಲೋಕೇಶ್ವರ್‌ರಾವ್, ಎಂ. ರಾಜು, ಎಂ.ಎಸ್ ಸುಧಾಮಣಿ ಸೇರಿದಂತೆ ನೂರಾರು ಮಂದಿ ಅಪ್ಪಾಜಿ ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಪಟೇಲ್ ಹನುಮಂತಪ್ಪ ನಿಧನ

ಪಟೇಲ್ ಹನುಮಂತಪ್ಪ
ಭದ್ರಾವತಿ, ಸೆ. ೨೮: ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷೆ ಪದ್ಮಮ್ಮರವರ ಪತಿ ಹಳೇನಗರದ ರಥಬೀದಿ ರಸ್ತೆ ನಿವಾಸಿ, ಜಮೀನ್ದಾರ್  ಆರ್. ಪಟೇಲ್ ಹನುಮಂತಪ್ಪ(೭೪) ನಿಧನ ಹೊಂದಿದರು.
       ಪತ್ನಿ, ೨ ಗಂಡು, ೨ ಹೆಣ್ಣು ಮಕ್ಕಳು, ಸೊಸೆ ಹಾಗು ಅಳಿಯಂದಿರು, ಮೊಮ್ಮಕ್ಕಳನ್ನು ಹೊಂದಿದ್ದರು. ಹನುಮಂತಪ್ಪ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಒಡನಾಡಿಯಾಗಿ ಗುರುತಿಸಿಕೊಂಡಿದ್ದರು. ಇವರ ನಿಧನಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಮಧು ಬಂಗಾರಪ್ಪ, ಜಿ.ಪಂ. ಸದಸ್ಯ ಜೆ.ಪಿ ಯೋಗೇಶ್, ಜೆಡಿಎಸ್ ಮುಖಂಡ ಎಂ. ಶ್ರೀಕಾಂತ್, ಸಿಂಗನಮನೆ ಗ್ರಾ.ಪಂ. ಸದಸ್ಯ ಟಿ.ಡಿ. ಶಶಿಕುಮಾರ್, ನಾಗರಾಜ್  ಮಧುಗಿರಿ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.  

ಶತಾಯುಷಿ ಫಾತೀಮಾ ಬೀ ನಿಧನ

ಫಾತೀಮಾ ಬೀ ನಿಧನ
ಭದ್ರಾವತಿ: ಮಾಜಿ ನಗರಸಭೆ ಸದಸ್ಯ, ಹಳೇನಗರದ ನಿವಾಸಿ ಅಬ್ದುಲ್ ರಹಮಾನ್(ದಿಲ್ದಾರ್)ರವರ ತಾಯಿ, ಶತಾಯುಷಿ ಫಾತೀಮಾ ಬೀ(೧೧೬) ಭಾನುವಾರ ನಿಧನ ಹೊಂದಿದರು.
೭ ಗಂಡು, ೫ ಹೆಣ್ಣು ಮಕ್ಕಳು, ಸೊಸೆ, ಅಳಿಯಂದಿರು ಹಾಗು ಮೊಕ್ಕಳನ್ನು ಹೊಂದಿದ್ದರು. ಮೃತರ ನಿಧನಕ್ಕೆ ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.