ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆ ಶುಕ್ರವಾರ ನ್ಯೂಟೌನ್ನಲ್ಲಿರುವ ಪರಿಷತ್ ಕಚೇರಿಯಲ್ಲಿ ನಡೆಯಿತು.
ಭದ್ರಾವತಿ, ಡಿ. ೪: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆ ಶುಕ್ರವಾರ ನ್ಯೂಟೌನ್ನಲ್ಲಿರುವ ಪರಿಷತ್ ಕಚೇರಿಯಲ್ಲಿ ನಡೆಯಿತು.
ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಾಹಿತ್ಯ ಸಮ್ಮೇಳನ, ಜಿಲ್ಲಾ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸುವ ಬಗ್ಗೆ ಹಾಗೂ ಪರಿಷತ್ತಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.
ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿಗಳಾದ ವೈ.ಕೆ ಹನುಮಂತಯ್ಯ ಸಿ. ಚನ್ನಪ್ಪ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರಿದ್ದರು.