Friday, December 4, 2020

ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆ

ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆ ಶುಕ್ರವಾರ ನ್ಯೂಟೌನ್‌ನಲ್ಲಿರುವ ಪರಿಷತ್ ಕಚೇರಿಯಲ್ಲಿ ನಡೆಯಿತು.  
ಭದ್ರಾವತಿ, ಡಿ. ೪: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆ ಶುಕ್ರವಾರ  ನ್ಯೂಟೌನ್‌ನಲ್ಲಿರುವ ಪರಿಷತ್ ಕಚೇರಿಯಲ್ಲಿ ನಡೆಯಿತು.  
   ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಾಹಿತ್ಯ ಸಮ್ಮೇಳನ, ಜಿಲ್ಲಾ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸುವ ಬಗ್ಗೆ  ಹಾಗೂ ಪರಿಷತ್ತಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.  
     ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿಗಳಾದ ವೈ.ಕೆ  ಹನುಮಂತಯ್ಯ ಸಿ. ಚನ್ನಪ್ಪ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರಿದ್ದರು.

ಜಹರ ಹರ್ಮೈನ್ ವೈದ್ಯಕೀಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ

ಭದ್ರಾವತಿ ಖಲಂದರ್ ನಗರದ ನಿವಾಸಿ ಜಹರ ಹರ್ಮೈನ್ ವೈದ್ಯಕೀಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡರು.
ಭದ್ರಾವತಿ, ಡಿ. ೪: ನಗರಸಭೆ ವ್ಯಾಪ್ತಿಯ ಖಲಂದರ್ ನಗರದ ನಿವಾಸಿ ಜಹರ ಹರ್ಮೈನ್ ವೈದ್ಯಕೀಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
   ಓರಲ್ ಅಂಡ್ ಮ್ಯಾಕ್ಸಿಲೊಫೇಶಿಯಲ್ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ ಮೊದಲಸ್ಥಾನ ಕಾಯ್ದುಕೊಂಡಿದ್ದಾರೆ. ಇವರು ನಗರದ ಹಫೀಸಿಯ ಮಸೀದಿ ಮತ್ತು ಉಸ್ಮಾನಿಯಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಬೀಬುಲ್ಲಾ ಖಾನ್(ನಾಸಿರ್‌ಖಾನ್) ಪುತ್ರಿಯಾಗಿದ್ದಾರೆ. ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಇವರನ್ನು ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.

ಲೈಂಗಿಕ ಕಿರುಕುಳ ಆರೋಪ : ವೈದ್ಯರೊಬ್ಬರ ವಿರುದ್ಧ ಪ್ರಕರಣ ದಾಖಲು

ಭದ್ರಾವತಿ: ಮೂಲವ್ಯಾಧಿ ವೈದ್ಯರೊಬ್ಬರು ಮಹಿಳೆಯೊಬ್ಬರಿಗೆ ಚಿಕಿತ್ಸೆ ನೀಡುವಾಗ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರಕುಳ ನೀಡಿದ್ದಾರೆಂದು ಆರೋಪಿಸಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣವೊಂದು ದಾಖಲಾಗಿದೆ.  
ಹಳೇನಗರದ ಖಾಜಿ ಮೊಹಲ್ಲಾದಲ್ಲಿ ಕ್ಲಿನಿಕ್ ಹೊಂದಿರುವ ವೈದ್ಯರೊಬ್ಬರು ಲೈಂಗಿಕ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.