Wednesday, January 13, 2021

ಆರ್‌ಎಫ್‌ಓ ಅಮಾನತ್ತುಗೊಳಿಸಲು ಆಗ್ರಹಿಸಿ ಧರಣಿ ಸತ್ಯಾಗ್ರಹ

ಕರ್ತವ್ಯ ಲೋಪ ವೆಸಗಿರುವ ಅರಣ್ಯ ಇಲಾಖೆ ಮಾವಿನಕಟ್ಟೆ ವಲಯ(ಶಾಂತಿ ಸಾಗರ)ದ ವಲಯ ಅರಣ್ಯಾಧಿಕಾರಿ ಮಾವಿನ ಹೊಳೆಯಪ್ಪರವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸ ಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲೂಕು ಘಟಕದ ವತಿಯಿಂದ ಬುಧವಾರ ಭದ್ರಾವತಿ ಬಿ.ಎಚ್ ರಸ್ತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು.
        ಭದ್ರಾವತಿ, ಜ. ೧೩: ಕರ್ತವ್ಯ ಲೋಪ ವೆಸಗಿರುವ ಅರಣ್ಯ ಇಲಾಖೆ ಮಾವಿನಕಟ್ಟೆ ವಲಯ(ಶಾಂತಿ ಸಾಗರ)ದ ವಲಯ ಅರಣ್ಯಾಧಿಕಾರಿ ಮಾವಿನ ಹೊಳೆಯಪ್ಪರವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲೂಕು ಘಟಕದ ವತಿಯಿಂದ ಬುಧವಾರ ಬಿ.ಎಚ್ ರಸ್ತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಆರ್‌ಎಫ್‌ಓ ಮಾವಿನ ಹೊಳೆಯಪ್ಪರವರು ಸುಮಾರು ೨ ತಿಂಗಳ ಹಿಂದೆ ಅರಣ್ಯ ಇಲಾಖೆಯ ದಿನಗೂಲಿ/ಪಿ.ಸಿ.ಪಿ ನೌಕರರನ್ನು ವಲಯದ ವ್ಯಾಪ್ತಿ ಮೀರಿ ತಮ್ಮ ಸ್ವಂತ ಜಮೀನಿನಲ್ಲಿ ಜೋಳ ಮುರಿದು ತುಂಬಿಸುವ ಕೆಲಸದಲ್ಲಿ ತೊಡಗಿಸಿಕೊಂಡು ಕರ್ತವ್ಯ ಲೋಪವೆಸಗಿದ್ದಾರೆ. ಈ ಕುರಿತು ವಿಡಿಯೋ ಚಿತ್ರೀಕರಣ ಹಾಗು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಂದ ಸ್ಥಳ ಮಹಜರು ನಡೆಸಿ ದೂರು ಸಲ್ಲಿಸಲಾಗಿದೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಮಾವಿನ ಹೊಳೆಯಪ್ಪನವರು ಈ ಹಿಂದೆ ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿ ಅಮಾನತ್ತುಗೊಂಡು ಪುನಃ ಮಾವಿನಕಟ್ಟೆ ವಲಯಕ್ಕೆ ಬಂದಿದ್ದು, ಇವರ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಮಾಡಿ ಹಣ ಸುಲಿಗೆ ಮಾಡುತ್ತಿರುವುದು, ಅರಣ್ಯದಲ್ಲಿರುವ ಕೆಮ್ಮಣ್ಣು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವುದು ಸೇರಿದಂತೆ ಹಲವು ದೂರುಗಳಿವೆ. ಈ ಹಿನ್ನಲೆಯಲ್ಲಿ ತಕ್ಷಣ ಮಾವಿನ ಹೊಳೆಯಪ್ಪರವರ ವಿರುದ್ಧ ಸಲ್ಲಿಸಿರುವ ದೂರು, ತನಿಖಾಧಿಕಾರಿಗಳು ಕೈಗೊಂಡಿರುವ ತನಿಖೆ ಹಾಗು ಸ್ಥಳ ಮಹಜರು ಮೇಲಾಧಿಕಾರಿಗಳಿಂದ ಪರಿಶೀಲಿಸಿ ಸೇವೆಯಿಂದ ಅಮಾನುಗೊಳಿಸುವಂತೆ ಸೂಚಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಒತ್ತಾಯಿಸಲಾಯಿತು.
      ಕರಾವೇ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ಪ್ರಧಾನ ಕಾರ್ಯದರ್ಶಿ ಸಂದೇಶ್‌ಗೌಡ, ಕಾರ್ಯದರ್ಶಿ ಪಿ. ನಾಗರಾಜ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ, ಗೋಪನಾಳ್  ಘಟಕದ ಅಧ್ಯಕ್ಷ ಎಸ್. ಪ್ರಭು, ತರೀಕೆರೆ ತಾಲೂಕು ಅಧ್ಯಕ್ಷ ವಿ. ಹರೀಶ್‌ಗೌಡ, ಸಂಯುಕ್ತ ಜನತಾದಳ ರಾಜ್ಯ ಯುವ ಘಟಕ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ, ಸಾಮಾಜಿಕ ಹೋರಾಟಗಾರ ಶಿವಕುಮಾರ್, ಎಸ್. ಮನೋಜ್, ಹೀರಾಲಾಲ್, ಉಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment