Saturday, January 2, 2021

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಅದ್ದೂರಿ ಸ್ವಾಗತ

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಭದ್ರಾವತಿ ನಗರಕ್ಕೆ ಆಗಮಿಸಿದ ಮಾಜಿ ಸಚಿವ ಸಿ.ಟಿ ರವಿಯವರನ್ನು ಶನಿವಾರ ಸಂಜೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
    ಭದ್ರಾವತಿ, ಜ. ೨: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಮಾಜಿ ಸಚಿವ ಸಿ.ಟಿ ರವಿಯವರನ್ನು ಶನಿವಾರ ಸಂಜೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
     ಶಿವಮೊಗ್ಗದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸಿ.ಟಿ ರವಿಯವರನ್ನು ತಾಲೂಕಿನ ಗಡಿ ಭಾಗದ ಬಾರಂದೂರು ಗ್ರಾಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸುವ ಜೊತೆಗೆ ನಗರದ ಹುತ್ತಾ ಕಾಲೋನಿವರೆಗೂ ಬೈಕ್ ರ‍್ಯಾಲಿ ನಡೆಸಿದರು. ಸಿ.ಟಿ ರವಿ ಕೆಲ ಸಮಯ ಮುಖಂಡರು, ಕಾರ್ಯಕರ್ತರೊಂದಿಗೆ ಸಂಭ್ರಮ ಹಂಚಿಕೊಂಡು ನಂತರ ಶಿವಮೊಗ್ಗಕ್ಕೆ ತೆರಳಿದರು.

No comments:

Post a Comment