Monday, January 25, 2021

ತಾಲ್ಲೂಕು ಕಛೇರಿ ಸೇರಿದಂತೆ ವಿವಿಧೆಡೆ ಮತದಾರರ ದಿನ


ಭದ್ರಾವತಿ ಜೆ ಪಿ ಎಸ್ ಕಾಲೋನಿಯಲ್ಲಿರುವ ಘಟಕ -1ರ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ  ಕಾರ್ಯನಿರ್ವಾಹಕ  ಅಭಿಯಂತರ  ಎನ್. ಎಸ್ ಸತೀಶ್ಚಂದ್ರ ನೇತೃತ್ವದಲ್ಲಿ ಮತದಾರರ ದಿನ ನಡೆಯಿತು.
ಭದ್ರಾವತಿ :  ತಾಲ್ಲೂಕು ಕಚೇರಿ, ಶಾಲಾ ಕಾಲೇಜು  ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಸೋಮವಾರ ಮತದಾರರ ದಿನ ಆಚರಿಸಲಾಯಿತು. 
   ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಚುನಾವಣಾ ತರಬೇತಿ ಅಧಿಕಾರಿ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ಬಿ.ಜಿ  ಧನಂಜಯ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
     ನ್ಯಾಯಾಧೀಶ  ಪುರುಷೋತ್ತಮ್,  ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಜಯರಾಮ್, ಕಾರ್ಯದರ್ಶಿ ಟಿ.ಎಸ್ ರಾಜು, ಸರ್ಕಾರಿ ಅಭಿಯೋಜಕ ತ್ಯಾಗರಾಜ್,  ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ಉಪ ತಹಸೀಲ್ದಾರ್ ಮಲ್ಲಿಕಾರ್ಜುನಯ್ಯ, ಶಿರಸ್ತೇದಾರ್ ಮಂಜಾನಾಯ್ಕ್, ಕಂದಾಯ ಅಧಿಕಾರಿ ಪ್ರಶಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
        ಮೆಸ್ಕಾಂ  ಘಟಕ-1ರ ವಿಭಾಗೀಯ  ಕಚೇರಿಯಲ್ಲಿ  ಮತದಾರರ ದಿನ: 
  ಜೆಪಿಎಸ್ ಕಾಲೋನಿಯಲ್ಲಿರುವ ಘಟಕ -1ರ ವಿಭಾಗೀಯ  ಕಚೇರಿಯಲ್ಲಿ ವಿಭಾಗೀಯ  ಕಾರ್ಯನಿರ್ವಾಹಕ ಅಭಿಯಂತರ ಎನ್. ಎಸ್ ಸತೀಶ್ಚಂದ್ರ ನೇತೃತ್ವದಲ್ಲಿ ಮತದಾರರ ದಿನ ನಡೆಯಿತು.
     ಕಚೇರಿ  ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಲೆಕ್ಕಾಧಿಕಾರಿ ಎಂ.ಈ ರಾಮಚಂದ್ರ, ಸಹಾಯಕ ಲೆಕ್ಕಾಧಿಕಾರಿ ಎಂ. ಜಿ ಅಶ್ವಿನ್ ಕುಮಾರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment