Thursday, January 21, 2021

ಜ.೨೪ರಂದು ೪೩ನೇ ವರ್ಷದ ಸಂಭಮದ ಸಮಾರಂಭ

ಭದ್ರಾವತಿ, ಜ. ೨೧: ನಗರದ ಬೈಪಾಸ್ ರಸ್ತೆ ಉಜ್ಜನಿಪುರದಲ್ಲಿರುವ ಕುರುಹೀನಶೆಟ್ಟಿ ಸಂಘದ ೪೩ನೇ ವರ್ಷದ ಸಂಭ್ರಮ ಸಮಾರಂಭ ಜ.೨೪ರಂದು ನಡೆಯಲಿದೆ.
    ಬೆಳಿಗ್ಗೆ ೧೧ ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಎನ್ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ದೇವಾಂಗ ಸಂಘದ ಅಧ್ಯಕ್ಷ ಎಂ. ಪ್ರಭಾಕರ್, ನಗರಸಭೆ ಸದಸ್ಯೆ ವಿಶಾಲಾಕ್ಷಿ, ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಚಂದ್ರಶೇಖರ್, ಸಂಘದ ಅಧ್ಯಕ್ಷ ಎನ್.ಆರ್ ಜಯರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

No comments:

Post a Comment