Thursday, January 28, 2021

೧೭ ದಿನಗಳ ಹೋರಾಟಕ್ಕೆ ಸ್ಪಂದಿಸಿದ ಸಂಸದ ಬಿ.ವೈ ರಾಘವೇಂದ್ರ

ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ಅನುದಾನಕ್ಕೆ ಭರವಸೆ

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಸುಮಾರು ೧೭ ದಿನಗಳಿಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕೊನೆಗೂ ಸಂಸದ ಬಿ.ವೈ ರಾಘವೇಂದ್ರ ಗುರುವಾರ ಸ್ಪಂದಿಸಿದರು.
    ಭದ್ರಾವತಿ, ಜ. ೨೮: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಛೇರಿ ಮುಂಭಾಗ ಸುಮಾರು ೧೭ ದಿನಗಳಿಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕೊನೆಗೂ ಸಂಸದ ಬಿ.ವೈ ರಾಘವೇಂದ್ರ ಸ್ಪಂದಿಸಿದ್ದಾರೆ.  
    ಸಮಿತಿಯ ಪ್ರಮುಖ ಬೇಡಿಕೆಗಳಲ್ಲಿ ಒಂದಾದ ನಗರದಲ್ಲಿ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ೫.೫೦ ಕೋ. ರು. ಬಿಡುಗಡೆಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಕಾರ್ಯಕ್ರಮ ನಿಮಿತ್ತ ಗುರುವಾರ ನಗರಕ್ಕೆ ಆಗಮಿಸಿದ್ದ ಸಂಸದರು ಅಂಬೇಡ್ಕರ್ ಭವನ ಕಾಮಗಾರಿ ವೀಕ್ಷಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಸಮಿತಿಗೆ ನೀಡಿದರು.
    ಸಮಿತಿ ವತಿಯಿಂದ ಸಂಸದರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಪ್ರಮುಖರಾದ ಆರ್. ಬಸವರಾಜ್, ಐ.ಎಲ್ ಅರುಣ್‌ಕುಮಾರ್, ಎಂ.ವಿ ಚಂದ್ರಶೇಖರ್, ಸುಬ್ಬೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment