Wednesday, February 10, 2021

ರೋಟರಿ ಕ್ಲಬ್ ವತಿಯಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಉಚಿತ ೨೦ ಟ್ಯಾಪ್ ವಿತರಣೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ೧೦ನೇ ತರಗತಿ ಮಕ್ಕಳಿಗೆ ರೋಟರಿ ಕ್ಲಬ್ ವತಿಯಿಂದ ಉಚಿತವಾಗಿ ೨೦ ಟ್ಯಾಪ್‌ಗಳನ್ನು ಬುಧವಾರ ವಿತರಿಸಲಾಯಿತು.
    ಭದ್ರಾವತಿ, ಫೆ. ೧೦: ತಾಲೂಕಿನ ಕೂಡ್ಲಿಗೆರೆ ಗ್ರಾಮದ ಶ್ರೀ ಹರಿಹರೇಶ್ವರ ಪ್ರೌಢಶಾಲೆ ೧೦ನೇ ತರಗತಿ ಮಕ್ಕಳಿಗೆ ರೋಟರಿ ಕ್ಲಬ್ ವತಿಯಿಂದ ಉಚಿತವಾಗಿ ೨೦ ಟ್ಯಾಪ್‌ಗಳನ್ನು ಬುಧವಾರ ವಿತರಿಸಲಾಯಿತು.
ಶಾಲೆಯಲ್ಲಿ ಒಟ್ಟು ೪೦ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿದ್ದು, ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಒಂದೊಂದು ಟ್ಯಾಪ್‌ಗಳಂತೆ ಒಟ್ಟು ೨೦ ಟ್ಯಾಪ್‌ಗಳನ್ನು ವಿತರಿಸುವ ಮೂಲಕ ಶಿಕ್ಷಣದಲ್ಲಿ ಪ್ರಗತಿ ಸಾಧಿಸುವಂತೆ ಕರೆ ನೀಡಲಾಯಿತು.
     ಕಾರ್ಯಕ್ರಮವನ್ನು ಹಟ್ಟಿ ಚಿನ್ನದ ಗಣಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್ ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ರೋಟರಿ ಕ್ಲಬ್ ಅಸಿಸ್ಟೆಂಟ್ ಗವರ್ನರ್ ಎನ್.ಎಸ್ ಶ್ರೀಧರ್, ಡಿಎಲ್‌ಸಿಸಿ ಎಚ್.ಎಲ್ ರವಿ, ಜೋನಲ್ ಲೆಫ್ಟಿನೆಂಟ್ ಡಾ. ಕೆ. ನಾಗರಾಜ್, ಜೋನಲ್ ಟ್ರೈನರ್ ಜಿ. ವಿಜಯಕುಮಾರ್, ಶಿವಮೊಗ್ಗ ರೋಟರಿ ಕ್ಲಬ್ ಅಧ್ಯಕ್ಷ ಎಚ್.ಎಸ್ ಮೋಹನ್, ರವೀಂದ್ರನಾಥ ಐತಾಳ್, ಪ್ರಮುಖರಾದ ಸುಂದರ್‌ಬಾಬು, ಅಡವೀಶಯ್ಯ, ರಾಘವೇಂದ್ರ ಉಪಾಧ್ಯಾಯ, ಕಾರ್ಯದರ್ಶಿ ಎಂ.ಎನ್ ಗಿರೀಶ್, ಶಾಲೆಯ ಮುಖ್ಯೋಪಾಧ್ಯಾಯ ಸಿ. ಹರೀಶ್‌ಬಾಬು ಸೇರಿದಂತೆ ಗ್ರಾಮದ ಪ್ರಮುಖರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


No comments:

Post a Comment