Sunday, February 7, 2021

ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ : ನಗರ ಸಂಕೀರ್ತನಾ ಯಾತ್ರೆ

೭ ವರ್ಷದ ಬಾಲಕಿ ಜನ್ಮದಿನ ಅಂಗವಾಗಿ ನಿಧಿ ಸಮರ್ಪಣೆ

ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಭಾನುವಾರ ಭದ್ರಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ ನಡೆಯಿತು.
     ಭದ್ರಾವತಿ, ಫೆ. ೭: ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಭಾನುವಾರ ನಗರ ಸಂಕೀರ್ತನಾ ಯಾತ್ರೆ ನಡೆಯಿತು.
     ಹೊಸಮನೆ ವೃತ್ತದಿಂದ ಸಂಜೆ ೪ ಗಂಟೆಗೆ ಆರಂಭಗೊಂಡ ಯಾತ್ರೆ ರಂಗಪ್ಪ ವೃತ್ತ, ಸಿ.ಎನ್ ರಸ್ತೆ, ಮಾಧವಚಾರ್ ವೃತ್ತ, ಬಿ.ಎಚ್ ರಸ್ತೆ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದವರೆಗೆ ಸಾಗಿತು.  
   ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಪ್ರಮುಖರಾದ ಹಾ. ರಾಮಪ್ಪ, ಬಿ.ಕೆ ಶ್ರೀನಾಥ್, ಮಂಗೋಟೆ ರುದ್ರೇಶ್, ಸುಬ್ರಮಣಿ, ನರಸಿಂಹಚಾರ್, ಚಂದ್ರಪ್ಪ, ಚನ್ನೇಶ್, ಗಣೇಶ್‌ರಾವ್, ಜಿ. ಆನಂದಕುಮಾರ್, ಎಂ. ಮಂಜುನಾಥ್, ಬಾರಂದೂರು ಪ್ರಸನ್ನ, ಅನ್ನಪೂರ್ಣ ಸಾವಂತ್, ಶೋಭಾ ಸೇರಿದಂತೆ ನೂರಾರು ಮಂದಿ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕರ್ತರು ಪಾಲ್ಗೊಂಡಿದ್ದರು.


೭ ವರ್ಷದ ಬಾಲಕಿ ಸೃಷ್ಠಿ ಕಳೆದ ೨ ವರ್ಷಗಳಿಂದ ಸಂಗ್ರಹಿಸಿದ್ದ ಕಾಣಿಕೆ ಹುಂಡಿ ಹಣ ೮೨೮ ರು. ಗಳನ್ನು ತನ್ನ ಜನ್ಮದಿನದ ಅಂಗವಾಗಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಮರ್ಪಿಸುವ ಮೂಲಕ ಗಮನ ಸೆಳೆದಿದ್ದಾಳೆ.
      ೭ ವರ್ಷದ ಬಾಲಕಿ ಜನ್ಮದಿನ ಅಂಗವಾಗಿ ನಿಧಿ ಸಮರ್ಪಣೆ :
    ಹುತ್ತಾಕಾಲೋನಿ ನಿವಾಸಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಧುಸೂದನ್ ಹಾಗು ಶೃತಿ ದಂಪತಿ ಪುತ್ರಿ, ೭ ವರ್ಷದ ಬಾಲಕಿ ಸೃಷ್ಠಿ ಕಳೆದ ೨ ವರ್ಷಗಳಿಂದ ಸಂಗ್ರಹಿಸಿದ್ದ ಕಾಣಿಕೆ ಹುಂಡಿ ಹಣ ೮೨೮ ರು. ಗಳನ್ನು ತನ್ನ ಜನ್ಮದಿನದ ಅಂಗವಾಗಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಮರ್ಪಿಸುವ ಮೂಲಕ ಗಮನ ಸೆಳೆದಿದ್ದಾಳೆ.
ಅಭಿಯಾನದ ಕಾರ್ಯಕರ್ತರಾದ ಸುಬ್ರಮಣ್ಯ, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment