ಭದ್ರಾವತಿ, ಜ. ೨: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ೨ನೇ ಹಂತದ ಮಾದಿಗರ ಜೈತನ್ಯ ರಥ ಯಾತ್ರೆ ಫೆ.೩ರಂದು ನಗರಕ್ಕೆ ಆಗಮಿಸಲಿದೆ.
ಸಂಜೆ ೪ ಗಂಟೆಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತಕ್ಕೆ ರಥ ಯಾತ್ರೆ ಆಗಮಿಸಲಿದ್ದು, ತಾಲೂಕು ಮಾದಿಗ ಒಕ್ಕೂಟದಿಂದ ಈ ರಥ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಈ ಹಿನ್ನಲೆಯಲ್ಲಿ ತಾಲೂಕಿನ ಮಾದಿಗ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಒಕ್ಕೂಟದ ಅಧ್ಯಕ್ಷ ಎಂ. ಶಿವಕುಮಾರ್ ಕೋರಿದ್ದಾರೆ.
No comments:
Post a Comment