ಪ್ರತಿ ದಿನ ೨೦೦ ಮಂದಿಗೆ ಲಸಿಕೆ ಹಾಕುವ ಗುರಿ : ಡಾ. ಎಂ.ವಿ ಅಶೋಕ್
ಭದ್ರಾವತಿ, ಫೆ. ೨೮: ಕೊರೋನಾ ಲಸಿಕೆ ೩ನೇ ಹಂತದ ಅಭಿಯಾನಕ್ಕೆ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿದ್ದತೆಗಳನ್ನು ಕೈಗೊಂಡಿದ್ದು, ಪ್ರತಿ ದಿನ ೨೦೦ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ತಿಳಿಸಿದರು.
ಅವರು ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿ, ಒಟ್ಟು ೪ ವಿಭಾಗಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಈ ಬಾರಿ ಮೊದಲ ವಿಭಾಗದಲ್ಲಿ ೪೯ ರಿಂದ ೫೯ ವರ್ಷದೊಳಗಿನ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿಸಿಕೊಳ್ಳುವವರು ಕಡ್ಡಾಯವಾಗಿ ವೈದ್ಯರಿಂದ ತಪಾಸಣೆ ದೃಢೀಕರಣ ಪತ್ರ ತರಬೇಕು. ಉಳಿದಂತೆ ೨ನೇ ವಿಭಾಗದಲ್ಲಿ ೬೦ ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುವುದು. ೩ನೇ ವಿಭಾಗದಲ್ಲಿ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಹಿಂದೆ ಲಸಿಕೆ ಪಡೆಯದವರಿಗೆ ಹಾಗು ೪ನೇ ವಿಭಾಗದಲ್ಲಿ ಇನ್ನಿತರರಿಗೆ ಲಸಿಕೆ ಹಾಕಲು ಸಿದ್ದತೆ ನಡೆಸಲಾಗಿದೆ ಎಂದರು.
ಲಸಿಕೆ ಹಾಕುವ ಕಾರ್ಯದಲ್ಲಿ ಓರ್ವ ವೈದ್ಯ, ಓರ್ವ ಲಸಿಕೆ ಹಾಕುವವರು, ಸಹಾಯಕರು, ಪರಿಶೀಲನೆ ನಡೆಸುವವರು ಸೇರಿದಂತೆ ಒಟ್ಟು ೧೦ ಮಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ತಾಲೂಕು ಆಸ್ಪತ್ರೆಯಲ್ಲಿ ಮಾತ್ರ ಲಸಿಕೆ ಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಲಸಿಕೆ ಹಾಕಲಾಗುವುದು. ಆದರೆ ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ ಎಂದರು.
No comments:
Post a Comment