ಭದ್ರಾವತಿ, ಫೆ. ೨೦: ಜಯ ಕರ್ನಾಟಕ ತಾಲೂಕು ಪದಾಧಿಕಾರಿಗಳ ಪುನರ್ ರಚನೆ ಹಾಗು ಅಧ್ಯಕ್ಷರು, ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆ.೨೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಡಾ. ಜೆ.ಆರ್ ದೀಪಕ್, ಗೌರವಾಧ್ಯಕ್ಷ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಅರ್ ಶಿವಕುಮಾರ್ ಅದ್ವಾನಿ, ಕಾರ್ಯಾಧ್ಯಕ್ಷ ಅಬ್ದುಲ್ ರಹೀಮ್, ಮಹಿಳಾ ಘಟಕದ ಅಧ್ಯಕ್ಷೆ ನಾಜೀಮಾ, ಆಟೋ ಘಟಕದ ಅಧ್ಯಕ್ಷ ಎಚ್.ಬಿ ಶಿವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ನೂತನ ಪದಾಧಿಕಾರಿಗಳಾಗಿ ಆರ್. ಅರುಣ್, ಪಿ. ಶರವಣ, ಜೀವನ್, ಪಿ.ಬಿ ವಿನಯ್ ಸೇರಿದಂತೆ ಇನ್ನಿತರರು ಪದಗ್ರಹಣ ಸ್ವೀಕರಿಸಲಿದ್ದಾರೆ.
ಕಾರ್ಯಕರ್ತರು, ಮುತ್ತಪ್ಪ ರೈ ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment