Friday, February 19, 2021

ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ, ನಾಡು-ನುಡಿಗೆ ಅವಮಾನ

ಶಾಸಕ ಹ್ಯಾರಿಸ್ ವಿರುದ್ಧ ಕಠಿಣ ಕೈಗೊಳ್ಳಿ : ಕೆ. ಮಂಜುನಾಥ್ ಆಗ್ರಹ


ವರನಟ, ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಪುತ್ಥಳಿ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಶಾಸಕ ಹ್ಯಾರಿಸ್ ವಿರುದ್ಧ ಶುಕ್ರವಾರ ಭದ್ರಾವತಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಜನಸೈನ್ಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು
   ಭದ್ರಾವತಿ, ಫೆ. ೧೯: ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವ ಹಾಗು ಕನ್ನಡ ಭಾಷೆ ನಾಡು-ನುಡಿಗೆ ಅಗೌರವದಿಂದ ತೋರಿಸುತ್ತಿರುವ ಕಾಂಗ್ರೆಸ್ ಶಾಸಕ ಹ್ಯಾರಿಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಜನಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಎಚ್ಚರಿಸಿದರು.
    ಅವರು ಶುಕ್ರವಾರ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ವರನಟ, ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಪುತ್ಥಳಿ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಶಾಸಕ ಹ್ಯಾರಿಸ್ ವಿರುದ್ಧ ಪ್ರತಿಭಟನೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
   ಕಾಂಗ್ರೆಸ್ ಶಾಸಕ ಹ್ಯಾರಿಸ್ ಹಾಗು ಅವರ ಪುತ್ರ ಮಹಮದ್ ಹ್ಯಾರಿಸ್ ನಲಪಾಡ್  ಇಬ್ಬರು ಸಹ ಪದೇ ಪದೇ ಕನ್ನಡಿಗರ ಸ್ವಾಭಿಮಾನ ಕೆಣಕುವ ಜೊತೆಗೆ ನಾಡು-ನುಡಿಗೆ ಅವಮಾನ ಮಾಡುತ್ತಿದ್ದಾರೆ. ತಕ್ಷಣ ಇವರನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್‌ರವರು ಪಕ್ಷದಿಂದ ವಜಾಗೊಳಿಸಬೇಕು. ಇದೆ ರೀತಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಹ ಹ್ಯಾರಿಸ್ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
   ಇದಕ್ಕೂ ಮೊದಲು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಹ್ಯಾರಿಸ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
    ಜಿಲ್ಲಾ ಗೌರವಾಧ್ಯಕ್ಷ ಅನಿಲ್(ಬಾಬು), ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಗ್ರಾಮಾಂತರ ಅಧ್ಯಕ್ಷ ಪ್ರದೀಪ್, ತಾಲೂಕು ಅಧ್ಯಕ್ಷ ರಾಜು, ಪರಮೇಶ್, ಸಂತೋಷ್‌ಕುಮಾರ್, ದೀಕ್ಷಿತ್, ಚೇತನ್, ಶಿವು, ಸುನಿಲ್, ಜಗ್ಗ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

No comments:

Post a Comment