Sunday, February 7, 2021

ಟೆನ್ನಿಸ್ ಬಾಲ್ ಸೆಮಿ ಸರ್ಕಲ್ ಕ್ರಿಕೆಟ್ ಟೂರ್ನಿಮೆಂಟ್ : ಡಿಆರ್‌ಸಿಸಿ ತಂಡಕ್ಕೆ ಮೊದಲ ಬಹುಮಾನ

ಕರ್ನಾಟಕ ಜನ ಸೈನ್ಯ ವತಿಯಿಂದ ಭದ್ರಾವತಿ ಹೊಸಸಿದ್ದಾಪುರ ಶ್ರೀ ಚೌಡೇಶ್ವರಿ ದೇವಸ್ಥಾನ ಸಮೀಪದ ಅಶ್ವಥ್ ಕಟ್ಟೆ ಖಾಲಿ ಜಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಮೊದಲ ವರ್ಷದ ಟೆನ್ನಿಸ್ ಬಾಲ್ ಸೆಮಿ ಸರ್ಕಲ್ ಕ್ರಿಕೆಟ್ ಟೂರ್ನಿಮೆಂಟ್‌ನಲ್ಲಿ ಮೊದಲ ಬಹುಮಾನ ಪಡೆದ ಡಿಆರ್‌ಸಿಸಿ ತಂಡಕ್ಕೆ ಟ್ರೋಫಿ ವಿತರಿಸಲಾಯಿತು.
    ಭದ್ರಾವತಿ, ಫೆ. ೭: ಕರ್ನಾಟಕ ಜನ ಸೈನ್ಯ ವತಿಯಿಂದ ಹೊಸಸಿದ್ದಾಪುರ ಶ್ರೀ ಚೌಡೇಶ್ವರಿ ದೇವಸ್ಥಾನ ಸಮೀಪದ ಅಶ್ವಥ್ ಕಟ್ಟೆ ಖಾಲಿ ಜಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಮೊದಲ ವರ್ಷದ ಟೆನ್ನಿಸ್ ಬಾಲ್ ಸೆಮಿ ಸರ್ಕಲ್ ಕ್ರಿಕೆಟ್ ಟೂರ್ನಿಮೆಂಟ್ ಭಾನುವಾರ ಯಶಸ್ವಿಯಾಗಿ ಮುಕ್ತಾಯಗೊಂಡಿತು.
    ಪಂದ್ಯಾವಳಿಯಲ್ಲಿ ಡಿಆರ್‌ಸಿಸಿ ತಂಡ ಮೊದಲ ಬಹುಮಾನ ಹಾಗು ಅಭಿಮನ್ಯ ಬಾಯ್ಸ್ ತಂಡ ೨ನೇ ಬಹುಮಾನ ಪಡೆದುಕೊಂಡವು. ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಕರ್ನಾಟಕ ಜನ ಸೈನ್ಯ ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮಿ, ವಿಶಿಷ್ಟವಾದ ಅಪರೂಪದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಸ್ಥಳೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಪಂದ್ಯಾವಳಿಗಳು ಇನ್ನೂ ಹೆಚ್ಚಾಗಿ ನಡೆಯುವಂತಾಗಲಿ ಎಂದರು.
    ಪಂದ್ಯಾವಳಿಯಲ್ಲಿ ಸುಮಾರು ೧೪ ತಂಡಗಳು ಭಾಗವಹಿಸಿದ್ದವು. ಶನಿವಾರ ಪಂದ್ಯಾವಳಿಗೆ ನಗರಸಭೆ ಪೌರಾಯುಕ್ತ ಮನೋಹರ್ ಚಾಲನೆ ನೀಡಿದರು.
   ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನ ಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಗೌರವಾಧ್ಯಕ್ಷ ಅನಿಲ್(ಬಾಬು), ಸಮಾಜ ಸೇವಕ ಅಶೋಕ್ ಕುಮಾರ್, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತದ್ದರು.

No comments:

Post a Comment