Wednesday, February 3, 2021

ರು.೧೦ ಲಕ್ಷ ವೆಚ್ಚದಲ್ಲಿ ಖಬರ್‌ಸ್ತಾನ್ ಸುತ್ತ ಕಾಂಪೌಂಡ್ ನಿರ್ಮಾಣಕ್ಕೆ ಚಾಲನೆ

ಭದ್ರಾವತಿ ತರೀಕೆರೆ ರಸ್ತೆಯಲ್ಲಿ ಹಜರತ್ ಸೈಯದ್ ಸಾದತ್ ದರ್ಗಾ ಮುಂಭಾಗದಲ್ಲಿರುವ ಖಬರ್‌ಸ್ತಾನ್ ಸುತ್ತ ಸುಮಾರು ೧೦ ಲಕ್ಷ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಚಾಲನೆ ನೀಡಿದರು.
  ಭದ್ರಾವತಿ, ಫೆ. ೩: ನಗರದ ತರೀಕೆರೆ ರಸ್ತೆಯ ಹಜರತ್ ಸೈಯದ್ ಸಾದತ್ ದರ್ಗಾ ಮುಂಭಾಗದಲ್ಲಿರುವ ಖಬರ್‌ಸ್ತಾನ್ ಸುತ್ತ ಸುಮಾರು ೧೦ ಲಕ್ಷ ರು. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಚಾಲನೆ ನೀಡಿದರು.
  ಖಬರ್‌ಸ್ತಾನ್ ಸುತ್ತ ಕಾಂಪೌಂಡ್ ಇಲ್ಲದೆ ಇರುವುದರಿಂದ ಸಾಕಷ್ಟು ಸಮಸ್ಯೆಯಾಗಿದ್ದು, ಈ ಹಿನ್ನಲೆಯಲ್ಲಿ ಕಾಂಪೌಂಡ್ ನಿರ್ಮಿಸುವಂತೆ ದರ್ಗಾ ಕಮಿಟಿ ವತಿಯಿಂದ ನಗರಸಭೆಗೆ ಮನವಿ ಸಲ್ಲಿಸಲಾಗಿತ್ತು.
    ಧರ್ಮಗುರುಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರಾದ ಸಿ.ಎಂ ಖಾದರ್, ಮಹಮದ್ ಸನಾವುಲ್ಲಾ, ದಿಲ್‌ದಾರ್, ಬಾಬಾಜಾನ್, ಅಮೀರ್‌ಜಾನ್, ಅಬ್ದುಲ್ ಖದೀರ್, ಕಮಿಟಿ ಅಧ್ಯಕ್ಷ ಮುಕ್ರಂ ಖಾನ್ ಮತ್ತು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



No comments:

Post a Comment