Friday, February 19, 2021

ನಗರದ ವಿವಿಧೆಡೆ ರಥ ಸಪ್ತಮಿ : ಉತ್ಸವ ಮೆರವಣಿಗೆ, ಸೂರ್ಯ ನಮಸ್ಕಾರ

ಭದ್ರಾವತಿ ಹಳೇನಗರದ ಪುರಾಣಪ್ರಸಿದ್ಧ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶುಕ್ರವಾರ ರಥಸಪ್ತಮಿ ಅಂಗವಾಗಿ ಪ್ರಾಂಗಣದಲ್ಲಿ ಮೂಲ ದೇವರ ಉತ್ಸವಮೂರ್ತಿ ಮೆರವಣಿಗೆ ನಡೆಸಲಾಯಿತು.
    ಭದ್ರಾವತಿ, ಫೆ. ೧೯: ಹಳೇನಗರದ ಪುರಾಣಪ್ರಸಿದ್ಧ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶುಕ್ರವಾರ ರಥಸಪ್ತಮಿ ಅಂಗವಾಗಿ ಪ್ರಾಂಗಣದಲ್ಲಿ ಮೂಲ ದೇವರ ಉತ್ಸವಮೂರ್ತಿ ಮೆರವಣಿಗೆ ನಡೆಸಲಾಯಿತು.
   ಪ್ರತಿ ವರ್ಷದಂತೆ ಈ ಬಾರಿ ಸಹ ಮೂಲದೇವರಿಗೆ ವಿಶೇಷ ಪೂಜೆ, ಆಲಂಕಾರದೊಂದಿಗೆ ಗರುಡ ವಾಹನದಲ್ಲಿ ಉತ್ಸವ ಮೆರವಣಿಗೆ ನಡೆಯಿತು. ಕೋವಿಡ್-೧೯ರ ಹಿನ್ನಲೆಯಲ್ಲಿ ಧಾರ್ಮಿಕ ಆಚರಣೆಗಳನ್ನು ಸರಳವಾಗಿ ನೆರವೇರಿಸಲಾಯಿತು.
  ದೇವಾಲಯದ ಸಹಾಯಕ ಅರ್ಚಕ ಶ್ರೀನಿವಾಸನ್, ನಾರಾಯಣಾಚಾರ್, ಅಭಿರಾಂ, ಶ್ರೀಕಾಂತ, ರಮಾಕಾಂತ, ಕೃಷ್ಣಪ್ಪ, ಸರು, ರವಿ, ಶೋಭಾ, ಅಭಿ, ಶೇಖರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  
   ೧೦೮ ಸೂರ್ಯ ನಮಸ್ಕಾರ :
    ಲಯನ್ಸ್ ಕ್ಲಬ್ ಶುಗರ್ ಟೌನ್ ಮತ್ತು ಲಯನ್ಸ್ ಯೋಗ ಸಮಿತಿ ಹಾಗು ಪತಂಜಲಿ ಯೋಗ ಸಮಿತಿ ವತಿಯಿಂದ ರಥಸಪ್ತಮಿ ಅಂಗವಾಗಿ ನ್ಯೂಟೌನ್ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ೧೦೮ ಸೂರ್ಯ ನಮಸ್ಕಾರ ನಡೆಸಲಾಯಿತು.
   ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ನರೇಂದ್ರ ಭಟ್, ಡಾ.ಪಿ ಸೆಲ್ವರಾಜ್, ಡಾ. ವೃಂದ ಭಟ್, ನಾರಾಯಣ ಮೂರ್ತಿ, ಅನ್ನಪೂರ್ಣ ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   ಬನಶಂಕರಿ ದೇವಾಲಯದಲ್ಲಿ ರಥ ಸಪ್ತಮಿ:
  ಹೊಸಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ರಥ ಸಪ್ತಮಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.
    ಅಮ್ಮನವರಿಗೆ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಅನ್ನ ಪ್ರಸಾದ ವಿತರಣೆ ಸೇರಿದಂತೆ ಇನ್ನಿತರರ ಕಾರ್ಯಕ್ರಮಗಳು ಜರುಗಿದವು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿ ಸೇರಿದಂತೆ ನೂರಾರು ಭಕ್ತಾಧಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment