Wednesday, February 3, 2021

ಅಪಘಾತ : ಇಬ್ಬರು ಕೂಲಿ ಕಾರ್ಮಿಕರು ಮೃತ

    ಭದ್ರಾವತಿ, ಫೆ. ೩: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ತಾಲೂಕು ದೊಡ್ಡೇರಿ ಗ್ರಾಮದ ಸಮೀಪ ನಡೆದಿದೆ.
    ಹೊಸಮನೆ ನಿವಾಸಿಗಳಾದ ಶಿವು(೨೮) ಮತ್ತು ರಾಘವೇಂದ್ರ(೩೦) ಮೃತಪಟ್ಟಿದ್ದಾರೆ. ಭದ್ರಾವತಿಯಿಂದ ಶಿವನಿ ಕಡೆಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಮತ್ತು ಭದ್ರಾವತಿಗೆ ಆಗಮಿಸುತ್ತಿದ್ದ ದ್ವಿಚಕ್ರವಾಹನಗಳ ನಡುವೆ ರಾತ್ರಿ ಸುಮಾರು ೯ ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


No comments:

Post a Comment