ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ 'ಬಂಜಾರ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಅಭಿನಂದನಾ' ಕಾರ್ಯಕ್ರಮದಲ್ಲಿ ಭದ್ರಾವತಿ ಹಳ್ಳಿಕೆರೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಎಸ್. ಕೂಬಾನಾಯ್ಕ್ ರವರಿಗೆ 'ಬಂಜಾರ ರತ್ನ' ಪ್ರಶಸ್ತಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಭದ್ರಾವತಿ, ಫೆ. ೨: ತಾಲೂಕಿನ ಹಳ್ಳಿಕೆರೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ, ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಸ್. ಕೂಬಾನಾಯ್ಕ್ 'ಬಂಜಾರ ರತ್ನ' ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ 'ಬಂಜಾರ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಅಭಿನಂದನಾ' ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ರಾಜ್ಯದ ವಿವಿಧ ಭಾಗಗಳಲ್ಲಿರುವ ಬಂಜಾರ ಸಮಾಜದ ಸುಮಾರು ೧೪ ಶಾಖಾ ಮಠಗಳ ಸ್ವಾಮೀಜಿಗಳು, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾವಿಜಯಕುಮಾರ್, ಸಾಮಾಜಿಕ ಕಳಕಳಿ ವೇದಿಕೆ ಸಂಸ್ಥಾಪಕ ಡಾ. ರಾಜಾನಾಯ್ಕ್, ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್ ಗಿರೀಶ್ ಮತ್ತು ಹೃದಯರೋಗ ತಜ್ಞ ಡಾ. ಗಿರೀಶ್ ಮೂಡ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ