Saturday, February 20, 2021

ರಾಮನಕೊಪ್ಪ ಸರ್ಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ


ಕಂದಾಯ ಇಲಾಖೆ ವತಿಯಿಂದ ಭದ್ರಾವತಿ ತಾಲೂಕಿನ ರಾಮನಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲೂಕು ಆಡಳಿತ ಹಾಗು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ನಡೆಸಲಾಯಿತು.
   ಭದ್ರಾವತಿ, ಫೆ. ೨೦: ಕಂದಾಯ ಇಲಾಖೆ ವತಿಯಿಂದ ತಾಲೂಕಿನ ರಾಮನಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲೂಕು ಆಡಳಿತ ಹಾಗು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ನಡೆಸಲಾಯಿತು.
   ಸರ್ಕಾರದ ಆದೇಶದಂತೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾಮ ವಾಸ್ತವ್ಯದ ಉದ್ದೇಶ ವಿವರಿಸುವ ಜೊತೆಗೆ ಪಿಂಚಣಿ, ಕೆರೆ ಒತ್ತುವರಿ, ಪೋಡಿ ಹಾಗು ಸಾಗುವಳಿ ಚೀಟಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ಅಹವಾಲು, ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಪಡಿಸುವ ಭರವಸೆ ನೀಡಿದರು.
ಬೆಳಿಗ್ಗೆಯಿಂದ ಸಂಜೆವರೆಗೂ ನಡೆದ ಗ್ರಾಮ ವಾಸ್ತವ್ಯದಲ್ಲಿ ಒಟ್ಟು ೨೪ ಅರ್ಜಿಗಳನ್ನು ಸ್ಥಳದಲ್ಲಿಯೇ ಸ್ವೀಕರಿಸಲಾಯಿತು.
  ಉಪತಹಸೀಲ್ದಾರ್ ಮಲ್ಲಿಕಾರ್ಜುನಯ್ಯ, ಶಿರಸ್ತೇದಾರ್ ಮಂಜನಾಯ್ಕ, ಕಂದಾಯಾಧಿಕಾರಿ ಪ್ರಶಾಂತ್ ಸೇರಿದಂತೆ ಗ್ರಾಮ ಲೆಕ್ಕಾಧಿಕಾರಿಗಳು, ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ತಹಸೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ಶಾಲೆಯಲ್ಲಿ ಮಧ್ಯಾಹ್ನ ಗ್ರಾಮಸ್ಥರೊಂದಿಗೆ ಭೋಜನ ಸವಿದರು.






No comments:

Post a Comment