ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಅಪ್ಪರ್ ಹುತ್ತಾದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಕ್ಯಾನ್ಸರ್ ರೋಗ ತಪಾಸಣೆ ಹಾಗು ಅರಿವು ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಿದರು.
ಭದ್ರಾವತಿ, ಫೆ. ೨೧: ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ರಕ್ಷಣೆ ಕುರಿತು ಹೆಚ್ಚಿನ ತಿಳುವಳಿಕೆ ಹೊಂದುವುದು ಅಗತ್ಯವಾಗಿದೆ ಎಂದು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಹೇಳಿದರು.
ಅವರು ವೇದಿಕೆ ವತಿಯಿಂದ ಅಪ್ಪರ್ ಹುತ್ತಾದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಕ್ಯಾನ್ಸರ್ ರೋಗ ತಪಾಸಣೆ ಹಾಗು ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆಮ್ಮು, ಶೀತ, ನೆಗಡಿ, ಚಳಿ ಜ್ವರ, ತಲೆ ನೋವು ಸೇರಿದಂತೆ ಇನ್ನಿತರ ಸಾಮಾನ್ಯ ಕಾಯಿಲೆಗಳ ಹೊರತಾಗಿ ಕ್ಯಾನ್ಸರ್ನಂತಹ ಕಾಯಿಲೆಗಳ ಕುರಿತು ಸಹ ಮಹಿಳೆಯರು ತಿಳುವಳಿಕೆ ಹೊಂದಬೇಕಾಗಿದೆ. ಈ ಹಿನ್ನಲೆಯಲ್ಲಿ ವೇದಿಕೆ ವತಿಯಿಂದ ಆರೋಗ್ಯ ಶಿಬಿರವನ್ನು ವಿಶೇಷವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದರು.
ನಗರಸಭೆ ಪೌರಾಯುಕ್ತ ಮನೋಹರ್ ಕಾರ್ಯಕ್ರಮ ಉದ್ಘಾಟಿಸಿದರು. ಶಿವಮೊಗ್ಗ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ತಜ್ಞ ವೈದ್ಯರು ತಪಾಸಣೆ ನಡೆಸುವ ಜೊತೆಗೆ ಮಾಹಿತಿ ನೀಡಿದರು.
ವೇದಿಕೆ ಉಪಾಧ್ಯಕ್ಷೆ ಸುಮಾ ಶಂಕರ್, ಕಾರ್ಯದರ್ಶಿ ಲತಾ ಪ್ರಭಾಕರ್, ಸಹ ಕಾರ್ಯದರ್ಶಿ ನಳಿನಾ, ಖಜಾಂಚಿ ಶಶಿಕಲಾ ಹಾಗು ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment