ಭದ್ರಾವತಿ, ಫೆ. ೨೪: ನಗರದ ತರೀಕೆರೆ ರಸ್ತೆಯಲ್ಲಿರುವ ಬಿ.ಜಿ.ಎಂ ಆಯುರ್ವೇದ ಮತ್ತು ಸಿದ್ದ ಚಿಕಿತ್ಸಾಲಯ ಹಾಗು ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದ ವತಿಯಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಲ್ಲಿ ಆರ್ಯುರ್ವೇದದ ಪ್ರತಿರಕ್ಷಣೆ ವಿಧಾನವಾದ 'ಸ್ವರ್ಣ ಬಿಂದು ಪ್ರಾಶನ' ಕಾರ್ಯಕ್ರಮ ಫೆ.೨೫ರಂದು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಹಾಗು ಸಂಜೆ ೬ ಗಂಟೆಯಿಂದ ರಾತ್ರಿ ೮ ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ೧೬ ವರ್ಷದೊಳಗಿನ ಎಲ್ಲಾ ಮಕ್ಕಳು ಪ್ರತಿ ತಿಂಗಳು ಸ್ವರ್ಣ ಬಿಂದು ಪ್ರಾಶನ ಹಾಕಿಸಿಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವ ಜೊತೆಗೆ ಉತ್ತಮವಾದ ದೈಹಿಕ ಹಾಗು ಮಾನಸಿಕ ಬೆಳವಣಿಗೆ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಇದರ ಸದುಪಯೋಗಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಡಾ. ವಿಕ್ರಮ್ ಮೊ: ೯೭೪೧೭೩೫೩೫೯ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment