Saturday, February 27, 2021

ಕ್ರಿಮಿನಲ್ ಪ್ರಕರಣಗಳಿಗೆ ಜಾಮೀನು ಕೊಡಿಸುತ್ತಿದ್ದ ದಲ್ಲಾಳಿಗೆ ಶಿಕ್ಷೆ

ದಲ್ಲಾಳಿ ಕುಮಾರ
    ಭದ್ರಾವತಿ, ಫೆ. ೨೭: ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ ಪರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರನ್ನು ಒದಗಿಸಿಕೊಡುತ್ತಿದ್ದ ದಲ್ಲಾಳಿಯೋರ್ವನಿಗೆ ೫ ತಿಂಗಳು ಸಾದ ಶಿಕ್ಷೆ ವಿಧಿಸಿರುವ ಘಟನೆ ನಡೆದಿದೆ.
   ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚನಮರಡಿ ನಿವಾಸಿ ಕುಮಾರ ಎಂಬಾತ ಶಿಕ್ಷೆಗೆ ಒಳಗಾಗಿದ್ದಾನೆ. ಈತ ನ್ಯಾಯಾಲಯದ ಆವರಣದಲ್ಲಿ ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸುವುದನ್ನು ರೂಢಿಗತ ಮಾಡಿಕೊಂಡಿದ್ದು, ಈತನಿಗೆ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಲಯದ ನ್ಯಾಯಾಧೀಶರಾದ ಹೇಮಾವತಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

No comments:

Post a Comment