ಹೊಯ್ಸಳ ಕರ್ನಾಟಕ ಸಂಘದ ಭದ್ರಾವತಿ ತಾಲೂಕು ಶಾಖೆಯ ಪುನಶ್ಚೇತನ ಕಾರ್ಯಚಟುವಟಿಕೆಗಳಿಗೆ ನ್ಯೂಟೌನ್ ಶ್ರೀ ದತ್ತಾಶ್ರಮದಲ್ಲಿ ಚಾಲನೆ ನೀಡಲಾಯಿತು.
ಭದ್ರಾವತಿ, ಮಾ. ೧೨: ನಗರದ ಹೊಯ್ಸಳ ಕರ್ನಾಟಕ ಸಂಘದ ಪುನಶ್ಚೇತನ ಕಾರ್ಯಚಟುವಟಿಕೆಗಳಿಗೆ ನ್ಯೂಟೌನ್ ಶ್ರೀ ದತ್ತಾಶ್ರಮದಲ್ಲಿ ಚಾಲನೆ ನೀಡಲಾಯಿತು.
ಕಾರಣಾಂತರಗಳಿಂದ ಸಂಘದ ಕಾರ್ಯಚಟುವಟಿಕೆಗಳು ಸ್ಥಗಿತಗೊಂಡಿದ್ದು, ಈ ಹಿನ್ನಲೆಯಲ್ಲಿ ಸತ್ಯನಾರಾಯಣಸ್ವಾಮಿ ಪೂಜೆಯೊಂದಿಗೆ ಪುನರ್ ಚಾಲನೆ ನೀಡಲಾಯಿತು. ಶಿವಮೊಗ್ಗ ಹೊಯ್ಸಳ ಕರ್ನಾಟಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ. ಶಂಕರ್, ತಾಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಎ.ಎನ್ ಕೃಷ್ಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ್ ಸ್ವಾಗತಿಸಿದರು. ಶಾರದ ವೆಂಕಟೇಶ್ ನಿರೂಪಿಸಿದರು. ಎಸ್. ಶೇಷಾದ್ರಿ ವಂದಿಸಿದರು.
No comments:
Post a Comment