ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಅಂಗವಾಗಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ, ಮಾ. ೧೪: ನಗರಸಭೆ ವ್ಯಾಪ್ತಿಯ ಕಾಗದನಗರದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಅಂಗವಾಗಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಡಿಲು ತುಂಬುವ ಮೂಲಕ ಗರ್ಭಿಣಿ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸುವಂತೆ ಜಾಗೃತಿ ಮೂಡಿಸಲಾಯಿತು. ಕಾಗದ ನಗರದ ಅಂಗನವಾಡಿ ಕಾರ್ಯಕರ್ತೆಯರಾದ ಎಸ್. ರಶ್ಮಿ, ಬಿ.ಆರ್ ಮೀನಾಕ್ಷಿ, ಎಚ್.ಆರ್ ಜಯಂತಿ, ಲಲಿತ ಹಾಗೂ ಅಂಗನವಾಡಿ ಕೇಂದ್ರದ ಸಹಾಯಕಿಯರು, ಕಿರಿಯ ಆರೋಗ್ಯ ಸಹಾಯಕಿಯರಾದ ಮಾರ್ಗರೇಟ್, ರಮ್ಯಾ ರವರು ಹಾಗೂ ಹಿರಿಯ ಆರೋಗ್ಯ ಸಹಾಯಕ ಮನೋಹರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment